Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಜೊತೆ 'ಮುಗಿಲ್ ಪೇಟೆ'ಗೆ ಹೋಗ್ತಾರೆ ಮನೋರಂಜನ್
'ಗಾಳಿಪಟ' ಸಿನಿಮಾದಲ್ಲಿ ಬರುವ 'ಮುಗಿಲ್ ಪೇಟೆ' ಊರಿನ ಹೆಸರು ಈಗ ಒಂದು ಸಿನಿಮಾದ ಟೈಟಲ್ ಆಗಿದೆ. ಮನೋರಂಜನ್ ರವಿಚಂದ್ರನ್ ಈ ಸಿನಿಮಾದ ನಾಯಕನಾಗಿದ್ದಾರೆ.
'ಮುಗಿಲ್ ಪೇಟೆ' ಮನೋರಂಜನ್ ರವಿಚಂದ್ರನ್ ನಟನೆಯ ನಾಲ್ಕನೇ ಸಿನಿಮಾ. ಈ ಸಿನಿಮಾ ಇದೇ ವಾರ ಲಾಂಚ್ ಆಗುತ್ತಿದೆ. ನಟ ದರ್ಶನ್ ಈ ಶುಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದರ್ಶನ್ ಮೂಲಕ ಮನೋರಂಜನ್ ನಾಲ್ಕನೇ ಸಿನಿಮಾ ಶುರು ಆಗುತ್ತಿದೆ.
ರವಿಚಂದ್ರನ್ ಸಿನಿಮಾ ನೋಡಿ ಅವ್ರ ಮಕ್ಕಳೇ ಭಯ ಪಟ್ಟರು
ಬೆಂಗಳೂರಿನ ಬಸವೇಶ್ವರ ನಗರದ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನವೆಂಬರ್ 15 ರಂದು ಮಧ್ಯಾಹ್ನ 12ಗೆ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಭರತ್ ಎಸ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚಿಗಷ್ಟೆ ಮನೋರಂಜನ್ ಅಭಿನಯದ ಮೂರನೇ ಸಿನಿಮಾ 'ಪ್ರಾರಂಭ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದ ದರ್ಶನ್ ಈಗ ಹೊಸ ಸಿನಿಮಾಗೆ ಸಹ ಸಹಕಾರ ನೀಡುತ್ತಿದ್ದಾರೆ.
'ಸಾಹೇಬ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ಮನೋರಂಜನ್ ರವಿಚಂದ್ರನ್ ಬಳಿಕ 'ಬೃಹಸ್ಪತಿ' ಹಾಗೂ 'ಪ್ರಾರಂಭ' ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಪ್ರಾರಂಭ' ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೊಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.