ಯುವ ಪ್ರತಿಭೆಗೆ ಕಾಲ್ ಶೀಟ್ ಕೊಟ್ಟ ರವಿಚಂದ್ರನ್ ಪುತ್ರ ಮನೋರಂಜನ್.!
Recommended Video

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ತಮ್ಮ ಚೊಚ್ಚಲ ಚಿತ್ರದಿಂದಲೂ ಹೊಸ ನಿರ್ದೇಶಕರು ಹಾಗೂ ಯುವ ಪ್ರತಿಭೆಗಳಿಗೆ ಮಣೆ ಹಾಕಿದ್ದಾರೆ. ಈ ಬಾರಿಯೂ ನವ ನಿರ್ದೇಶಕರಿಗೆ ಮನೋರಂಜನ್ ಕಾಲ್ ಶೀಟ್ ನೀಡಿದ್ದಾರೆ.
ಸದ್ಯ 'ಚಿಲ್ಲಂ' ಚಿತ್ರದಲ್ಲಿ ಬಿಜಿಯಾಗಿರುವ ಮನೋರಂಜನ್ ಇದೀಗ 'ಮುಂದಿನ ನಿಲ್ದಾಣ' ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 'ಮುಂದಿನ ನಿಲ್ದಾಣ' ಚಿತ್ರಕ್ಕೆ 'ಜೀವನದ ಪ್ರಾರಂಭ' ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ಹೊಸ ರೀತಿಯಲ್ಲಿ 'ಮುಂದಿನ ನಿಲ್ದಾಣ' ಚಿತ್ರದ ಸ್ಕ್ರಿಪ್ಟ್ ಬರೆದು, ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿರುವವರು ಮನು. ಈ ಚಿತ್ರಕ್ಕೆ ಮನು ಸಹೋದರ ಜಗದೀಶ್ ರವರೇ ಬಂಡವಾಳ ಹಾಕಲಿದ್ದಾರೆ.

ಮೈಸೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರಿನಲ್ಲಿ 'ಮುಂದಿನ ನಿಲ್ದಾಣ' ಚಿತ್ರದ ಶೂಟಿಂಗ್ ನಡೆಯಲಿದೆ. ಮೂಲಗಳ ಪ್ರಕಾರ, ಅಕ್ಟೋಬರ್ ತಿಂಗಳಲ್ಲಿ 'ಮುಂದಿನ ನಿಲ್ದಾಣ' ಚಿತ್ರ ಸೆಟ್ಟೇರಲಿದೆ.
ಚಿತ್ರಕ್ಕಿನ್ನೂ ನಾಯಕಿ ಹಾಗೂ ಇತರೆ ತಾರಾಬಳಗದ ಆಯ್ಕೆ ನಡೆದಿಲ್ಲ. 'ಮುಂದಿನ ನಿಲ್ದಾಣ' ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಕೊಡ್ತಾಯಿರ್ತೀವಿ, ಫಿಲ್ಮಿಬೀಟ್ ಕನ್ನಡ ಓದುತ್ತಿರಿ.


Click it and Unblock the Notifications











