Don't Miss!
- Finance April 23 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- News Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಪ್ರತಿಭೆಗೆ ಕಾಲ್ ಶೀಟ್ ಕೊಟ್ಟ ರವಿಚಂದ್ರನ್ ಪುತ್ರ ಮನೋರಂಜನ್.!
Recommended Video
ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ತಮ್ಮ ಚೊಚ್ಚಲ ಚಿತ್ರದಿಂದಲೂ ಹೊಸ ನಿರ್ದೇಶಕರು ಹಾಗೂ ಯುವ ಪ್ರತಿಭೆಗಳಿಗೆ ಮಣೆ ಹಾಕಿದ್ದಾರೆ. ಈ ಬಾರಿಯೂ ನವ ನಿರ್ದೇಶಕರಿಗೆ ಮನೋರಂಜನ್ ಕಾಲ್ ಶೀಟ್ ನೀಡಿದ್ದಾರೆ.
ಸದ್ಯ 'ಚಿಲ್ಲಂ' ಚಿತ್ರದಲ್ಲಿ ಬಿಜಿಯಾಗಿರುವ ಮನೋರಂಜನ್ ಇದೀಗ 'ಮುಂದಿನ ನಿಲ್ದಾಣ' ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 'ಮುಂದಿನ ನಿಲ್ದಾಣ' ಚಿತ್ರಕ್ಕೆ 'ಜೀವನದ ಪ್ರಾರಂಭ' ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ಮನೋರಂಜನ್ ರವಿಚಂದ್ರನ್ ಗೆ ವಿಲನ್ ಆದ ನಾನಾ ಪಾಟೇಕರ್
ಹೊಸ ರೀತಿಯಲ್ಲಿ 'ಮುಂದಿನ ನಿಲ್ದಾಣ' ಚಿತ್ರದ ಸ್ಕ್ರಿಪ್ಟ್ ಬರೆದು, ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿರುವವರು ಮನು. ಈ ಚಿತ್ರಕ್ಕೆ ಮನು ಸಹೋದರ ಜಗದೀಶ್ ರವರೇ ಬಂಡವಾಳ ಹಾಕಲಿದ್ದಾರೆ.
ಮೈಸೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರಿನಲ್ಲಿ 'ಮುಂದಿನ ನಿಲ್ದಾಣ' ಚಿತ್ರದ ಶೂಟಿಂಗ್ ನಡೆಯಲಿದೆ. ಮೂಲಗಳ ಪ್ರಕಾರ, ಅಕ್ಟೋಬರ್ ತಿಂಗಳಲ್ಲಿ 'ಮುಂದಿನ ನಿಲ್ದಾಣ' ಚಿತ್ರ ಸೆಟ್ಟೇರಲಿದೆ.
ಗಾಂಜಾ ಸ್ಮಗ್ಲರ್ ಆದ ರವಿಚಂದ್ರನ್ ಪುತ್ರ ಮನೋರಂಜನ್!
ಚಿತ್ರಕ್ಕಿನ್ನೂ ನಾಯಕಿ ಹಾಗೂ ಇತರೆ ತಾರಾಬಳಗದ ಆಯ್ಕೆ ನಡೆದಿಲ್ಲ. 'ಮುಂದಿನ ನಿಲ್ದಾಣ' ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಕೊಡ್ತಾಯಿರ್ತೀವಿ, ಫಿಲ್ಮಿಬೀಟ್ ಕನ್ನಡ ಓದುತ್ತಿರಿ.