Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಣೇಶ'ನ ಜೊತೆ 'ಸಾಹೇಬ'ನ ಎಂಟ್ರಿ
ಎಲ್ಲ ಅಂದುಕೊಂತೆ ಆಗಿದ್ದರೇ ಇಷ್ಟೊತ್ತಿಗಾಗಲೇ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ರವರ ಪುತ್ರ ಮನೋರಂಜನ್ ಅಭಿನಯದ 'ಸಾಹೇಬ' ಸಿನಿಮಾ ತೆರೆ ಕಾಣಬೇಕಿತ್ತು. ಆದ್ರೆ, ಪ್ರಾಣಿದಯಾ ಸಂಘದಿಂದ ಎನ್.ಓ.ಸಿ ಸಿಗದೆ, ಸೆನ್ಸಾರ್ ಆಗಿರಲಿಲ್ಲ. ಹೀಗಾಗಿ, ಚಿತ್ರದ ಬಿಡುಗಡೆ ವಿಳಂಬವಾಗಿತ್ತು.
ಈಗ ಎನ್.ಓ.ಸಿ ಪಡೆದು, ಸೆನ್ಸಾರ್ ಕೂಡ ಮುಗಿಸಿಕೊಂಡಿರುವ ಸಾಹೇಬ ಇದೇ ತಿಂಗಳಲ್ಲಿ ತೆರೆಮೇಲೆ ಅಬ್ಬರಿಸುತ್ತಿದ್ದಾನೆ. ಹೌದು, ಗಣೇಶ್ ಹಬ್ಬದ ಪ್ರಯುಕ್ತ ಆಗಸ್ಟ್ 25 ರಂದು ಸಾಹೇಬ ಸಿನಿಮಾ ಬಿಡುಗಡೆಯಾಗುತ್ತಿದೆ.
ಮನೋರಂಜನ್ ಗೆ 'ಮಾಸ್ಟರ್ ಪೀಸ್' ಬೆಡಗಿ ಶಾನ್ವಿ ಶ್ರೀವಾತ್ಸವ್ ಜೊತೆಯಾಗಿ ನಟಿಸಿದ್ದು, ಡ್ಯಾನ್ಸ್, ಖಡಕ್ ಡೈಲಾಗ್ ಮತ್ತು ಜಬರ್ ದಸ್ತ್ ಫೈಟ್ಸ್ ಗಳ ಮೂಲಕ ಚಿತ್ರದ ಟ್ರೈಲರ್ ಗಮನ ಸೆಳೆಯುತ್ತಿದೆ.
ವಿ.ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿರುವ 'ಸಾಹೇಬ' ಚಿತ್ರದ ಹಾಡುಗಳು ಮೋಡಿ ಮಾಡಿವೆ. ಚಿತ್ರದ ವಿಶೇಷ ಅಂದ್ರೆ ಈ ಚಿತ್ರದಲ್ಲಿ ವಿ.ರವಿಚಂದ್ರನ್ ರವರ 'ನಾನು ನನ್ನ ಹೆಂಡ್ತಿ' ಚಿತ್ರದ 'ಯಾರೇ ನೀನು ರೋಜಾ ಹೂವೆ... ಯಾರೇ ನೀನು ಮಲ್ಲಿಗೆ ಹೂವೆ' ಹಾಡನ್ನು ಅಳವಡಿಸಿಕೊಂಡಿದೆ.
ಇನ್ನು ಈ ಚಿತ್ರಕ್ಕೆ ಭರತ್ ಆಕ್ಷನ್ ಕಟ್ ಹೇಳಿದ್ದು, ಜಯಣ್ಣ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಜಯಣ್ಣ-ಭೋಗೇಂದ್ರ ನಿರ್ಮಾಣ ಮಾಡಿದ್ದಾರೆ. ಒಟ್ನಲ್ಲಿ ಈ ಬಾರಿಯ ಗಣೇಶ ಹಬ್ಬ ಸಾಹೇಬನಿಗೆ ಸ್ವಲ್ಪ ವಿಶೇಷವಾಗಿರಲಿದೆ.