Just In
Don't Miss!
- News
ವ್ಯರ್ಥ ಮಾಡಲು ಸಮಯವಿಲ್ಲ: ಮೊದಲ ದಿನವೇ ಕರ್ತವ್ಯದಲ್ಲಿ ಬ್ಯುಸಿಯಾದ ಬೈಡನ್
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗೀತಕ್ಕನ ಕತೆ ಹೇಳಿ ಗೆದ್ದ ಮಂಸೋರೆ ಅಬ್ಬಕ್ಕನ ಕತೆ ಹೇಳಲಿದ್ದಾರೆ
Act-1978 ಸಿನಿಮಾ ನಿರ್ದೇಶಿಸಿ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ನಿರ್ದೇಶಕ ಮಂಸೋರೆ ತಮ್ಮ ಹೊಸ ಸಿನಿಮಾದ ಘೋಷಣೆ ಮಾಡಿದ್ದಾರೆ.
Act-1978 ಮೂಲಕ ಪ್ರಸ್ತುತ ಸಮಾಜದ ಕತೆ ಹೇಳಿದ್ದ ಮಂಸೋರೆ ತಮ್ಮ ಮುಂದಿನ ಸಿನಿಮಾದಲ್ಲಿ ಇತಿಹಾಸದ ವಿಷಯಕ್ಕೆ ಕೈ ಹಾಕಿದ್ದಾರೆ. ವೀರ ರಾಣಿ ಅಬ್ಬಕ್ಕನ ಕತೆಯನ್ನು ಸಿನಿಮಾ ಮಾಡುವ ಸಾಹಸಕ್ಕೆ ಕೈ ಹಾಕಿದ್ದಾರೆ ಮಂಸೋರೆ ಮತ್ತು ತಂಡ.
'ಮೋಡಗಳೆಲ್ಲಾ ರಕ್ತವರ್ಣ.. ಸಮುದ್ರವೆಲ್ಲ ಅಗ್ನಿಕುಂಡ.. ಭೂಭಾಗದ ತುಂಬೆಲ್ಲಾ ಅಧಿಕಾರದ ದಾಹ, ಸ್ವಾರ್ಥದ ವಿಷದುಸಿರು.. ಬೆನ್ನ ಹಿಂದೆ ಇರಿಯುವ, ಕಣ್ಣ ಮುಂದೆಯೂ ಗುಂಡಿಕ್ಕುವ ಶತ್ರುಗಳು...! ತಾಯಿನಾಡು, ತಮ್ಮತನ, ತನ್ನವರಿಗಾಗಿ ಉಪ್ಪಿನ ಹಬೆಯಲ್ಲಿ ಬಿಸಿನೆತ್ತರ ಹರಿಸಿ ಹೋರಾಡಿ ಇತಿಹಾಸದ ಪುಟಗಳಲ್ಲಿ ಕಂಡು ಕಾಣದಂತೆ ಉಳಿದುಹೋದ ವೀರಚರಿತ್ರೆ - ಅರಬ್ಬೀ ಸಮುದ್ರದ ಅಭಯರಾಣಿ ಅಬ್ಬಕ್ಕ..!!" ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ ಮಂಸೋರೆ.
ನಿಮ್ಮೆಲ್ಲರ ಪ್ರೀತಿ, ಬೆಂಬಲ, ಪ್ರೋತ್ಸಾಹ ಈ ಹೊಸ ಸಾಹಸಕ್ಕೆ ಪ್ರೇರೇಪಿಸಿದೆ. ಎಂದಿನಂತೆ ನಿಮ್ಮ ಆಶೀರ್ವಾದ ಬೆಂಬಲ ನಮ್ಮ ತಂಡದ ಮೇಲಿರಲಿ ಎಂದು ಮನವಿ ಮಾಡಿದೆ ಮಂಸೋರೆ ಮತ್ತು ತಂಡ.
ಉಲ್ಲಾಳದ ರಾಣಿ ಅಬ್ಬಕ್ಕ ಪೋರ್ಚುಗೀಸರ ವಿರುದ್ಧ ಮಾಡಿದ್ದ ಹೋರಾಟ ಇತಿಹಾಸದಲ್ಲಿ ಅಚ್ಚಳಿಯದೆ ನಿಂತಿದೆ. ಅಷ್ಟೇ ಅಲ್ಲದೆ ಆಕೆಯ ಪ್ರಜಾಪ್ರಭುತ್ವ ಮಾದರಿಯ ಆಡಳಿತ ವೈಖರಿಯ ಬಗ್ಗೆಯೂ ಇತಿಹಾಸದಲ್ಲಿ ಉಲ್ಲೇಖಗಳಿವೆ. ಸರ್ವ ಧರ್ಮ ಸಮನ್ವಯತೆ, ಜನಪರ ಆಡಳಿತಗಳಿಂದ ಖ್ಯಾತ ರಾಗಿದ್ದರು ರಾಣಿ ಅಬ್ಬಕ್ಕ. ಈಗ ವೀರ ರಾಣಿಯ ಕತೆಯನ್ನು ಸಿನಿಮಾ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ ಮಂಸೋರೆ.