Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೀತಕ್ಕನ ಕತೆ ಹೇಳಿ ಗೆದ್ದ ಮಂಸೋರೆ ಅಬ್ಬಕ್ಕನ ಕತೆ ಹೇಳಲಿದ್ದಾರೆ
Act-1978 ಸಿನಿಮಾ ನಿರ್ದೇಶಿಸಿ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ನಿರ್ದೇಶಕ ಮಂಸೋರೆ ತಮ್ಮ ಹೊಸ ಸಿನಿಮಾದ ಘೋಷಣೆ ಮಾಡಿದ್ದಾರೆ.
Act-1978 ಮೂಲಕ ಪ್ರಸ್ತುತ ಸಮಾಜದ ಕತೆ ಹೇಳಿದ್ದ ಮಂಸೋರೆ ತಮ್ಮ ಮುಂದಿನ ಸಿನಿಮಾದಲ್ಲಿ ಇತಿಹಾಸದ ವಿಷಯಕ್ಕೆ ಕೈ ಹಾಕಿದ್ದಾರೆ. ವೀರ ರಾಣಿ ಅಬ್ಬಕ್ಕನ ಕತೆಯನ್ನು ಸಿನಿಮಾ ಮಾಡುವ ಸಾಹಸಕ್ಕೆ ಕೈ ಹಾಕಿದ್ದಾರೆ ಮಂಸೋರೆ ಮತ್ತು ತಂಡ.
'ಮೋಡಗಳೆಲ್ಲಾ ರಕ್ತವರ್ಣ.. ಸಮುದ್ರವೆಲ್ಲ ಅಗ್ನಿಕುಂಡ.. ಭೂಭಾಗದ ತುಂಬೆಲ್ಲಾ ಅಧಿಕಾರದ ದಾಹ, ಸ್ವಾರ್ಥದ ವಿಷದುಸಿರು.. ಬೆನ್ನ ಹಿಂದೆ ಇರಿಯುವ, ಕಣ್ಣ ಮುಂದೆಯೂ ಗುಂಡಿಕ್ಕುವ ಶತ್ರುಗಳು...! ತಾಯಿನಾಡು, ತಮ್ಮತನ, ತನ್ನವರಿಗಾಗಿ ಉಪ್ಪಿನ ಹಬೆಯಲ್ಲಿ ಬಿಸಿನೆತ್ತರ ಹರಿಸಿ ಹೋರಾಡಿ ಇತಿಹಾಸದ ಪುಟಗಳಲ್ಲಿ ಕಂಡು ಕಾಣದಂತೆ ಉಳಿದುಹೋದ ವೀರಚರಿತ್ರೆ - ಅರಬ್ಬೀ ಸಮುದ್ರದ ಅಭಯರಾಣಿ ಅಬ್ಬಕ್ಕ..!!" ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ ಮಂಸೋರೆ.
ನಿಮ್ಮೆಲ್ಲರ ಪ್ರೀತಿ, ಬೆಂಬಲ, ಪ್ರೋತ್ಸಾಹ ಈ ಹೊಸ ಸಾಹಸಕ್ಕೆ ಪ್ರೇರೇಪಿಸಿದೆ. ಎಂದಿನಂತೆ ನಿಮ್ಮ ಆಶೀರ್ವಾದ ಬೆಂಬಲ ನಮ್ಮ ತಂಡದ ಮೇಲಿರಲಿ ಎಂದು ಮನವಿ ಮಾಡಿದೆ ಮಂಸೋರೆ ಮತ್ತು ತಂಡ.
Recommended Video
ಉಲ್ಲಾಳದ ರಾಣಿ ಅಬ್ಬಕ್ಕ ಪೋರ್ಚುಗೀಸರ ವಿರುದ್ಧ ಮಾಡಿದ್ದ ಹೋರಾಟ ಇತಿಹಾಸದಲ್ಲಿ ಅಚ್ಚಳಿಯದೆ ನಿಂತಿದೆ. ಅಷ್ಟೇ ಅಲ್ಲದೆ ಆಕೆಯ ಪ್ರಜಾಪ್ರಭುತ್ವ ಮಾದರಿಯ ಆಡಳಿತ ವೈಖರಿಯ ಬಗ್ಗೆಯೂ ಇತಿಹಾಸದಲ್ಲಿ ಉಲ್ಲೇಖಗಳಿವೆ. ಸರ್ವ ಧರ್ಮ ಸಮನ್ವಯತೆ, ಜನಪರ ಆಡಳಿತಗಳಿಂದ ಖ್ಯಾತ ರಾಗಿದ್ದರು ರಾಣಿ ಅಬ್ಬಕ್ಕ. ಈಗ ವೀರ ರಾಣಿಯ ಕತೆಯನ್ನು ಸಿನಿಮಾ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ ಮಂಸೋರೆ.