Don't Miss!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ರಿಂದ ಮಂತ್ರಾಲಯ ಮಠಕ್ಕೆ ದೇಣಿಗೆ ಬಂದಿಲ್ಲ
ಇದುವರೆಗೆ ರಜನಿಕಾಂತ್ ಅವರಿಂದ ಯಾವುದೇ ದೇಣಿಗೆ ಮಠಕ್ಕೆ ಬಂದಿಲ್ಲ ಎಂದು ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಶ್ರೀ ಸುಶಮೀಂದ್ರ ಯತಿಗಳು ರಜನಿಕಾಂತ್ ಅವರ ಧರ್ಮಪತ್ನಿ ಲತಾ ಅವರ ಬಳಿ ಮಂತ್ರಾಲಯದಲ್ಲಿ ನಡೆಯುವ ಮೂರು ಕೆಲಸಗಳಿಗೆ ಆರ್ಥಿಕ ದೇಣಿಗೆ ನೀಡಬೇಕೆಂದು ಕೇಳಿದ್ದಾರೆ . ನಾವು ರಜನಿಕಾಂತ್ ಅವರ ಬಳಿ ಈ ಸಂಬಂಧ ಇದುವರೆಗೆ ಮಾತುಕತೆ ನಡೆಸಿಲ್ಲ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ.
ರಜನಿಕಾಂತ್ ಅವರ ಪತ್ನಿಯಿಂದ ಯಾವುದೇ ಖಚಿತ ಭರವಸೆ ಬಂದಿಲ್ಲ. ನಾವು ಹತ್ತು ಕೋಟಿ ರೂಪಾಯಿ ದೇಣಿಗೆ ಕೇಳಿದ್ದೇವೆ ಎಂದು ಮಂತ್ರಾಲಯ ರಾಯರ ಮಠದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
ರಜನಿಕಾಂತ್ ಅವರು ಏನು ದೇಣಿಗೆ ನೀಡುತ್ತಾರೋ ಅದನ್ನು ಮಠ ಸ್ವೀಕರಿಸುತ್ತದೆ. ಅವರು ನೀಡುವ ಮೊತ್ತವನ್ನು ಮಾಧ್ಯಮಗಳ ಮೂಲಕ ಭಕ್ತರಿಗೆ ತಿಳಿಸುತ್ತೇವೆ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ.
ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ವಿಶ್ವವಿಖ್ಯಾತ ಪುಣ್ಯಕ್ಷೇತ್ರ ಮಂತ್ರಾಲಯಕ್ಕೆ ಇತೀಚೆಗೆ ರಜನಿಕಾಂತ್ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 10 ಕೋಟಿ ರೂಪಾಯಿಗಳನ್ನು ದಾನವಾಗಿ ನೀಡಿದ್ದಾರೆ ಎಂದು ಈ ಹಿಂದೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.