ರಜನಿಕಾಂತ್ ರಿಂದ ಮಂತ್ರಾಲಯ ಮಠಕ್ಕೆ ದೇಣಿಗೆ ಬಂದಿಲ್ಲ

 Mantralayam Math denied Rajani's donation of Ten Crore
ಗುರುರಾಘವೇಂದ್ರರ ಪರಮ ಭಕ್ತ ಸ್ಟೈಲ್ ಕಿಂಗ್ ರಜನಿಕಾಂತ್ ಮಂತ್ರಾಲಯ ಮಠಕ್ಕೆ ಹತ್ತು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎನ್ನುವ ಮಾಧ್ಯಮಗಳಲ್ಲಿ ಹರಡಿದ ಸುದ್ದಿಯ ಬಗ್ಗೆ ಮಠ ಸ್ಪಷ್ಟೀಕರಣ ನೀಡಿದೆ.

ಇದುವರೆಗೆ ರಜನಿಕಾಂತ್ ಅವರಿಂದ ಯಾವುದೇ ದೇಣಿಗೆ ಮಠಕ್ಕೆ ಬಂದಿಲ್ಲ ಎಂದು ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಶ್ರೀ ಸುಶಮೀಂದ್ರ ಯತಿಗಳು ರಜನಿಕಾಂತ್ ಅವರ ಧರ್ಮಪತ್ನಿ ಲತಾ ಅವರ ಬಳಿ ಮಂತ್ರಾಲಯದಲ್ಲಿ ನಡೆಯುವ ಮೂರು ಕೆಲಸಗಳಿಗೆ ಆರ್ಥಿಕ ದೇಣಿಗೆ ನೀಡಬೇಕೆಂದು ಕೇಳಿದ್ದಾರೆ . ನಾವು ರಜನಿಕಾಂತ್ ಅವರ ಬಳಿ ಈ ಸಂಬಂಧ ಇದುವರೆಗೆ ಮಾತುಕತೆ ನಡೆಸಿಲ್ಲ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ.

ರಜನಿಕಾಂತ್ ಅವರ ಪತ್ನಿಯಿಂದ ಯಾವುದೇ ಖಚಿತ ಭರವಸೆ ಬಂದಿಲ್ಲ. ನಾವು ಹತ್ತು ಕೋಟಿ ರೂಪಾಯಿ ದೇಣಿಗೆ ಕೇಳಿದ್ದೇವೆ ಎಂದು ಮಂತ್ರಾಲಯ ರಾಯರ ಮಠದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

ರಜನಿಕಾಂತ್ ಅವರು ಏನು ದೇಣಿಗೆ ನೀಡುತ್ತಾರೋ ಅದನ್ನು ಮಠ ಸ್ವೀಕರಿಸುತ್ತದೆ. ಅವರು ನೀಡುವ ಮೊತ್ತವನ್ನು ಮಾಧ್ಯಮಗಳ ಮೂಲಕ ಭಕ್ತರಿಗೆ ತಿಳಿಸುತ್ತೇವೆ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ.

ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ವಿಶ್ವವಿಖ್ಯಾತ ಪುಣ್ಯಕ್ಷೇತ್ರ ಮಂತ್ರಾಲಯಕ್ಕೆ ಇತೀಚೆಗೆ ರಜನಿಕಾಂತ್ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 10 ಕೋಟಿ ರೂಪಾಯಿಗಳನ್ನು ದಾನವಾಗಿ ನೀಡಿದ್ದಾರೆ ಎಂದು ಈ ಹಿಂದೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.

More from Filmibeat

English summary
In a statement Mantralaya Raghavendra Math has clarified that they have not ( yet) received any donation from actor Rajanikanth. It was reported that Rajani has donated Rs 10 crore to the Math.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X