Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ರಿಂದ ಮಂತ್ರಾಲಯ ಮಠಕ್ಕೆ ದೇಣಿಗೆ ಬಂದಿಲ್ಲ
ಇದುವರೆಗೆ ರಜನಿಕಾಂತ್ ಅವರಿಂದ ಯಾವುದೇ ದೇಣಿಗೆ ಮಠಕ್ಕೆ ಬಂದಿಲ್ಲ ಎಂದು ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಶ್ರೀ ಸುಶಮೀಂದ್ರ ಯತಿಗಳು ರಜನಿಕಾಂತ್ ಅವರ ಧರ್ಮಪತ್ನಿ ಲತಾ ಅವರ ಬಳಿ ಮಂತ್ರಾಲಯದಲ್ಲಿ ನಡೆಯುವ ಮೂರು ಕೆಲಸಗಳಿಗೆ ಆರ್ಥಿಕ ದೇಣಿಗೆ ನೀಡಬೇಕೆಂದು ಕೇಳಿದ್ದಾರೆ . ನಾವು ರಜನಿಕಾಂತ್ ಅವರ ಬಳಿ ಈ ಸಂಬಂಧ ಇದುವರೆಗೆ ಮಾತುಕತೆ ನಡೆಸಿಲ್ಲ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ.
ರಜನಿಕಾಂತ್ ಅವರ ಪತ್ನಿಯಿಂದ ಯಾವುದೇ ಖಚಿತ ಭರವಸೆ ಬಂದಿಲ್ಲ. ನಾವು ಹತ್ತು ಕೋಟಿ ರೂಪಾಯಿ ದೇಣಿಗೆ ಕೇಳಿದ್ದೇವೆ ಎಂದು ಮಂತ್ರಾಲಯ ರಾಯರ ಮಠದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
ರಜನಿಕಾಂತ್ ಅವರು ಏನು ದೇಣಿಗೆ ನೀಡುತ್ತಾರೋ ಅದನ್ನು ಮಠ ಸ್ವೀಕರಿಸುತ್ತದೆ. ಅವರು ನೀಡುವ ಮೊತ್ತವನ್ನು ಮಾಧ್ಯಮಗಳ ಮೂಲಕ ಭಕ್ತರಿಗೆ ತಿಳಿಸುತ್ತೇವೆ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ.
ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ವಿಶ್ವವಿಖ್ಯಾತ ಪುಣ್ಯಕ್ಷೇತ್ರ ಮಂತ್ರಾಲಯಕ್ಕೆ ಇತೀಚೆಗೆ ರಜನಿಕಾಂತ್ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 10 ಕೋಟಿ ರೂಪಾಯಿಗಳನ್ನು ದಾನವಾಗಿ ನೀಡಿದ್ದಾರೆ ಎಂದು ಈ ಹಿಂದೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.