ದುನಿಯಾ ವಿಜಯ್ ವಿರುದ್ಧ ಜಾರ್ಚ್ ಶೀಟ್ ಸಲ್ಲಿಕೆ
ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಸಂದರ್ಭದಲ್ಲಿ ನಡೆದ ದುರಂತದಲ್ಲಿ ಅನಿಲ್ ಹಾಗೂ ರಾಘವ್ ಉದಯ್ ಎಂಬ ನಟರು ಸಾವಿಗೀಡಾದ ಪ್ರಕರಣ ಮತ್ತೆ ಜೀವ ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳಿಗೆ ನೆರವಾದ ಆರೋಪದ ಮೇಲೆ ನಟ ದುನಿಯಾ ವಿಜಯ್ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ.
ತಾವರೆಕೆರೆ ಪೊಲೀಸರು ಈಗಾಗಲೇ ಚಿತ್ರತಂಡದ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿರುವುದನ್ನು ಇಲ್ಲಿ ಸ್ಮರಿಸಬಹುದು. ಈಗ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು, ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಜಯ್ ಹಾಗೂ ಚಿತ್ರತಂಡದ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮಾಸ್ತಿಗುಡಿ ಚಿತ್ರೀಕರಣ ಸಂದರ್ಭದಲ್ಲಿ ದುರಂತ ಪ್ರಕರಣದ ಮುಯ ಆರೋಪಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ನಾಪತ್ತೆಯಾಗಲು ನಟ ದುನಿಯಾ ವಿಜಯ್ ನೆರವಾಗಿದ್ದರು ಎಂದು ದೋಷಾರೋಪಣ ಪಟ್ಟಿಯಲ್ಲಿ ಹೇಳಲಾಗಿದೆ.

ನಿರ್ದೇಶಕ ನಾಗಶೇಖರ್, ಸುಂದರಗೌಡ, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ. ಆದರೆ, ತಾವರೆಕೆರೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿ ದುನಿಯಾ ವಿಜಯ್ ಹೆಸರಿಲ್ಲ.


Click it and Unblock the Notifications











