Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ತಿಗುಡಿ' ದುರಂತ: ನಿರ್ಮಾಪಕ ಸುಂದರ್ ಪಿ ಗೌಡಗೆ ಹೈಕೋರ್ಟ್ ಜಾಮೀನು
'ಮಾಸ್ತಿಗುಡಿ' ಚಿತ್ರೀಕರಣದಲ್ಲಿ ಇಬ್ಬರು ಖಳನಟರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಳೆದ ವಾರವಷ್ಟೇ ಪ್ರಕರಣದ ಇತರೆ ಆರೋಪಿಗಳಾದ ಸಾಹಸ ನಿರ್ದೇಶಕ ರವಿವರ್ಮ ಹಾಗೂ ಚಿತ್ರದ ನಿರ್ದೇಶಕ ನಾಗಶೇಖರ್ ಅವರಿಗೆ ಜಾಮೀನು ನೀಡಲಾಗಿತ್ತು. ಈಗ ಪ್ರಕರಣದ ಒಂದನೇ ಆರೋಪಿಯಾಗಿರುವ ಸುಂದರ್ ಪಿ ಗೌಡ ಅವರಿಗೂ ಹೈಕೋರ್ಟ್ ಜಾಮೀನು ನೀಡಿದೆ.['ಮಾಸ್ತಿಗುಡಿ' ದುರಂತ: ನಾಗಶೇಖರ್, ರವಿವರ್ಮಗೆ ಷರತ್ತುಬದ್ಧ ಜಾಮೀನು]
ನವೆಂಬರ್ 7 ರಂದು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ 'ಮಾಸ್ತಿಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಸಾವಿಗೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ ಗೌಡ ಅವರನ್ನ ನವೆಂಬರ್ 8 ರಂದು ವಶಕ್ಕೆ ಪಡೆದು, ನ್ಯಾಯಂಗ ಬಂಧನದಲ್ಲಿ ಇಡಲಾಗಿತ್ತು.[ಎ-1 ಆರೋಪಿ 'ಮಾಸ್ತಿ ಗುಡಿ' ನಿರ್ಮಾಪಕ ಸುಂದರ್ ಗೌಡ ಅರೆಸ್ಟ್.! ]
ಈ ಹಿಂದೆ ಸುಂದರ್ ಪಿ ಗೌಡ ಅವರ ಜಾಮೀನು ಅರ್ಜಿಯನ್ನ ವಿಚಾರಣೆ ನಡೆಸಿದ್ದ ರಾಮನಗರ ಜಿಲ್ಲಾ ನ್ಯಾಯಾಲಯ, ಜಾಮೀನು ಅರ್ಜಿಯನ್ನ ತಿರಸ್ಕರಿಸಿತ್ತು. ತದನಂತರ ಹೈಕೋರ್ಟ್ ಮೊರೆ ಹೋಗಿದ್ದ ನಿರ್ಮಾಪಕರಿಗೆ ಈಗ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.