Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಒಡೆಯ' ಚಿತ್ರವನ್ನು ನೋಡಿ ಮೆಚ್ಚಿದ ದರ್ಶನ್ ತಾಯಿ ಮೀನಾ ತೂಗುದೀಪ.!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಒಡೆಯ' ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ತಮಿಳಿನ 'ವೀರಂ' ಚಿತ್ರದ ರೀಮೇಕ್ ಆಗಿದ್ದರೂ, 'ಒಡೆಯ' ಚಿತ್ರಕ್ಕೆ ಬಿಗ್ ಓಪನ್ನಿಂಗ್ ಸಿಕ್ಕಿದೆ. 'ದಾಸ'ನ ಅಭಿಮಾನಿಗಳಂತೂ 'ಒಡೆಯ'ನಿಗೆ ಜೈಕಾರ ಹಾಕುತ್ತಿದ್ದಾರೆ.
ಬಿಡುಗಡೆ ಆದ ಮೊದಲ ದಿನ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಂಡ 'ಒಡೆಯ' ಸಿನಿಮಾ ಸುಮಾರು 3 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಸೆಂಟಿಮೆಂಟ್, ಆಕ್ಷನ್, ಕಾಮಿಡಿ, ಲವ್ ಎಲ್ಲಾ ಮಿಕ್ಸ್ ಆಗಿರುವ 'ಒಡೆಯ' ಚಿತ್ರವನ್ನ ದರ್ಶನ್ ತಾಯಿ ಮೀನಾ ತೂಗುದೀಪ ಕಣ್ತುಂಬಿಕೊಂಡಿದ್ದಾರೆ.
ಮೊಮ್ಮಗ ಚಂದು ಜೊತೆಗೆ ಮಾಲ್ ವೊಂದರಲ್ಲಿ ಮೀನಾ ತೂಗುದೀಪ 'ಒಡೆಯ' ಚಿತ್ರವನ್ನ ವೀಕ್ಷಿಸಿದ್ದಾರೆ. ಕೌಟುಂಬಿಕ ಚಿತ್ರವಾಗಿರುವ 'ಒಡೆಯ' ಕಥೆ ಮೀನಾ ತೂಗುದೀಪ ಅವರ ಮನಸ್ಸಿಗೆ ಖುಷಿ ಕೊಟ್ಟಿದೆ. ದರ್ಶನ್ ಮತ್ತು ಸನಾ ತಿಮ್ಮಯ್ಯ ಆಕ್ಟಿಂಗ್ ಗೆ ಭೇಷ್ ಎಂದಿದ್ದಾರೆ ಮೀನಾ ತೂಗುದೀಪ.
ಒಂದು ದಿನದಲ್ಲಿ 'ಒಡೆಯ' ಸಿನಿಮಾ ಗಳಿಸಿದ ಹಣ ಎಷ್ಟು?
ಅಸಲಿಗೆ, 'ಒಡೆಯ' ಚಿತ್ರದ ನಾಯಕಿ ಪಾತ್ರಕ್ಕೆ ಸನಾ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಿ ಎಂದು ನಿರ್ಮಾಪಕ ಸಂದೇಶ್ ಗೆ ಹೇಳಿದ್ದು ಮೀನಾ ತೂಗುದೀಪ. ಇದೀಗ ತೆರೆ ಮೇಲೆ ದರ್ಶನ್ ಮತ್ತು ಸನಾ ಕಾಂಬಿನೇಶನ್ ನೋಡಿ ಮೀನಾ ತೂಗುದೀಪ ಸಂತಸ ಪಟ್ಟಿದ್ದಾರೆ.
ಮಕ್ಕಳಿಗೂ ಕೇಳಿರದ ಸಹಾಯವನ್ನು 'ಒಡೆಯ' ನಿರ್ಮಾಪಕರಿಗೆ ಕೇಳಿದರು ದರ್ಶನ್ ತಾಯಿ
ಎಂ.ಡಿ.ಶ್ರೀಧರ್ ಆಕ್ಷನ್ ಕಟ್ ಹೇಳಿರುವ 'ಒಡೆಯ' ಚಿತ್ರ 350ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. 'ಕುರುಕ್ಷೇತ್ರ' ಮತ್ತು 'ಯಜಮಾನ' ಚಿತ್ರದಂತೆ ಈ ವರ್ಷ ಬಾಕ್ಸ್ ಆಫೀಸ್ ನಲ್ಲಿ 'ಒಡೆಯ'ನ ಆರ್ಭಟ ಪಕ್ಕಾ.!