Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡದ ಕೋಟ್ಯಧಿಪತಿ'ಯಲ್ಲಿ 1 ಕೋಟಿ ಗೆದ್ದಿದ್ದು ಇವರೊಬ್ಬರೇ.!
Recommended Video
'ಕನ್ನಡದ ಕೋಟ್ಯಧಿತಿ' ಮೂರನೇ ಆವೃತ್ತಿ ನಡೆಯುತ್ತಿದೆ. ಈ ಆವೃತ್ತಿಯಲ್ಲಿ 25 ಲಕ್ಷ ಗೆದ್ದಿರುವುದೇ ಅತಿ ಹೆಚ್ಚು. ಇನ್ನು ಒಂದು ಕೋಟಿ ಗೆಲ್ಲುವ ಮಾತೆಲ್ಲಿ ಎಂಬುದು ವೀಕ್ಷಕರ ಅಭಿಪ್ರಾಯ.
ಅದೇಷ್ಟೋ ಜನರಿಗೆ ಗೊತ್ತಿದೆಯೋ ಅಥವಾ ಗೊತ್ತಿಲ್ವೋ, ಕನ್ನಡದ ಕೋಟ್ಯಧಿಪತಿಯ ಇತಿಹಾಸದಲ್ಲಿ ಇದುವರೆಗೂ ಕೇವಲ ಒಬ್ಬ ವ್ಯಕ್ತಿ ಮಾತ್ರ ಒಂದು ಕೋಟಿ ಗೆದ್ದಿದ್ದಾರೆ.
ಮಂತ್ರ ಪಠಿಸುತ್ತಾ ಕನ್ನಡದ ಕೋಟ್ಯಾಧಿಪತಿಯಾದ ಹುಸೇನ್
ಆ ಬಳಿಕ ಯಾರೊಬ್ಬರು ಕೋಟಿ ರೂಪಾಯಿಗೆ ಮುತ್ತಿಡಲಿಲ್ಲ. ಅಂದು ಒಂದು ಕೋಟಿ ಗೆದ್ದ ಸ್ಪರ್ಧಿ ಯಾರು.? ಹೇಗಿತ್ತು ಆತನ ಆಟ.? ಅಷ್ಟಕ್ಕೂ, ಆತ ಒಂದು ಕೋಟಿ ಗೆದ್ದಿದ್ದು ಯಾವಾಗ.? ಯಾರು ಆ ವ್ಯಕ್ತಿ ಎಂಬ ಕುತೂಹಲ ಈಗಾಗಲೇ ನಿಮ್ಮನ್ನು ಕಾಡುತ್ತಿದೆ. ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದ ಮೊದಲ ಕೋಟ್ಯಧಿಪತಿ ಇವರೇ ನೋಡಿ. ಮುಂದೆ ಓದಿ.....
29 ಏಪ್ರಿಲ್ 2013
ಕನ್ನಡದ ಕೋಟ್ಯಧಿಪತಿಯ ಎರಡನೇ ಆವೃತ್ತಿಯಲ್ಲಿ ಹುಸೇನ್ ಬಾಷಾ ಎಂಬುವರು ಮೊದಲ ಬಾರಿಗೆ 1 ಕೋಟಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. 28 ಮತ್ತು 29 ಏಪ್ರಿಲ್ 2013 ರಂದು ಈ ಎಪಿಸೋಡ್ ಪ್ರಸಾರವಾಗಿತ್ತು.
'ಲೈಫ್ ಲೈನ್' ಇದ್ರೂ 50 ಲಕ್ಷದ ಪ್ರಶ್ನೆಗೆ ಆಟ 'ಕ್ವಿಟ್' ಮಾಡಿದ ಸುಜಾತ, ಯಾಕೆ.?
ಯಾರು ಈ ಹುಸೇನ್ ಬಾಷಾ.?
ಹುಸೇನ್ ಬಾಷಾ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಕರಟಗಿ ಬಳಿ ಚೆಲ್ಲೂರಿನ ಗ್ರಾಮದವರು. ಬಡ ಕೃಷಿಕನ ಮಗ ಹುಸೇನ್ ಬಾಷಾ ಅಂದು ಸಿಎಂಎನ್ ಕಾಲೇಜಿನ ಪ್ರಥಮ ಬಿ.ಎ.ವಿದ್ಯಾರ್ಥಿಯಾಗಿದ್ದರು. ಮನೆಯ ಮೊದಲ ಮಗನಾಗಿ ನಾಲ್ಕು ತಂಗಿಯರು, ಒಬ್ಬ ತಮ್ಮ, ಅಪ್ಪ-ಅಮ್ಮ, ಅಜ್ಜ-ಅಜ್ಜಿ ಇಷ್ಟೂ ಜನರ ಜವಾಬ್ದಾರಿಯ ಜೊತೆಗೆ ಐಎಎಸ್ ಮಾಡುವ ಕನಸ ಕಂಡಿದ್ದ ಹುಸೇನ್ ಅಂದು ಕನ್ನಡದ ಕೋಟ್ಯಾಧಿಪತಿಯ ಹಾಟ್ ಸೀಟ್ ನಲ್ಲಿ ಸ್ಪರ್ಧಿಯಾಗಿದ್ದರು.
ಕಷ್ಟದ ಜೀವನ ಕಂಡಿದ್ದ ಹುಸೇನ್
ಕಡು ಬಡತನದಲ್ಲಿ ವ್ಯಾಸಂಗ ಮಾಡುತ್ತಿದ್ದ ಹುಸೇನ್ ತುಮಕೂರಿನ ಸಿದ್ಧಗಂಗಾ ಮಠದ ಹೈಸ್ಕೂಲಿಗೆ ಸೇರಿದ್ದರು. ಎಸ್ಎಸ್ಎಲ್ಸಿಯಲ್ಲಿ ಪ್ರಥಮದರ್ಜೆಯಲ್ಲಿ ಪಾಸಾದರೂ ಬಡತನ ಮತ್ತು ಮನೆ ಜವಾಬ್ದಾರಿ ಮುಂದೆ ಓದಲು ಬಿಡಲಿಲ್ಲ. ಮತ್ತೆ ಊರಿಗೆ ಹೋಗಿ ಕೃಷಿಯಲ್ಲಿ ತೊಡಗಿದರು. ಓದಬೇಕೆಂಬ ತುಡಿತ ಮಾತ್ರ ಕಡಿಮೆಯಾಗಲಿಲ್ಲ. ನಾಲ್ಕು ವರ್ಷ ದುಡಿದ ನಂತರ ಮತ್ತೆ ಕಾಲೇಜಿಗೆ ಸೇರಿದರು. ರಜೆಯಲ್ಲಿ ಬೆಂಗಳೂರಿಗೆ ಬಂದು ಕಂಠೀರವ ಸ್ಟುಡಿಯೊ ಬಳಿ ಲಾರಿ ಕ್ಲೀನರ್ ಆಗಿ ಕೂಡ ಕೆಲಸ ಮಾಡಿದ್ದರು.
'ಕನ್ನಡದ ಕೋಟ್ಯಧಿಪತಿ'ಯಲ್ಲಿ ದಾಖಲೆ ಬರೆದ ರಾಕಿಂಗ್ ಸ್ಟಾರ್
ಐಎಎಸ್ ಕನಸು ಕಂಡಿದ್ದ ಹುಸೇನ್
'ಪೃಥ್ವಿ' ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಪಾತ್ರ ನೋಡಿ ತಾನೂ ಐಎಎಸ್ ಪಾಸು ಮಾಡಬೇಕೆಂಬ ಕನಸು ಕಂಡಿದ್ದರು ಹುಸೇನ್ ಬಾಷಾ. ಅದಕ್ಕಾಗಿ ತಯಾರಿ ಕೂಡ ನಡೆಸಿದ್ದರು. ಅಷ್ಟರಲ್ಲೇ ಆತನ ಅದೃಷ್ಟ ಖುಲಾಯಿಸಿತ್ತು. 'ಕನ್ನಡದ ಕೋಟ್ಯಾಧಿಪತಿ' ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಕೋಟಿಗೆ ಗೆದ್ದುಬಿಟ್ಟರು.
'ಕನ್ನಡದ ಕೋಟ್ಯಧಿಪತಿ'ಯಲ್ಲಿ ಇತಿಹಾಸ ಸೃಷ್ಟಿಸಿದ ಸುಜಾತ
ಒನ್ ಇಂಡಿಯಾ ಕಚೇರಿಯಲ್ಲಿ 'ಕೋಟ್ಯಧಿಪತಿ'
ಮೊದಲ ಕೋಟ್ಯಧಿಪತಿ ಹುಸೇನ್ ಬಾಷಾ ಅಂದು ಜಯನಗರದಲ್ಲಿದ್ದ ಒನ್ ಇಂಡಿಯಾ ಕನ್ನಡ ಕಚೇರಿಗೆ ಭೇಟಿ ನೀಡಿದ್ದರು. ಒನ್ ಇಂಡಿಯಾ ಪತ್ರಕರ್ತರ ಜೊತೆ ಸಂವಾದ ನಡೆಸಿದ್ದರು.
ಒನ್ಇಂಡಿಯಾ ಕಚೇರಿಯಲ್ಲಿ ಕೋಟಿ ಗೆದ್ದ ಬಾಷಾ
ಹದಿನೈದು ಪ್ರಶ್ನೆಗಳಿಗೂ ಉತ್ತರಿಸಿದ್ದ ಹುಸೇನ್
ಕನ್ನಡದ ಕೋಟ್ಯಧಿಪತಿಯಲ್ಲಿ ಕೇಳಲಾದ ಎಲ್ಲ ಹದಿನೈದು ಪ್ರಶ್ನೆಗಳಿಗೂ ಹುಸೇನ್ ಬಾಷಾ ಸರಿಯಾಗಿ ಉತ್ತರಿಸಿದ್ದರು. ಯಾವುದೇ ಗೊಂದಲವಿಲ್ಲದೇ ನಿಖರವಾಗಿ ಉತ್ತರ ಕೊಟ್ಟಿದ್ದರು. ಅಂದು ಹುಸೇನ್ ಬಾಷಾ ಎದುರಿಸಿದ ಪ್ರಶ್ನೆಗಳನ್ನ ನಿಮ್ಮ ಮುಂದೆ ಇಡಲು ಪ್ರಯತ್ನ ಮಾಡುತ್ತೇವೆ. ನಿರೀಕ್ಷಿಸಿ.....