Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾವೆಲ್ಲರೂ ಜತೆಯಾಗಿದ್ದೇವೆ, ಶೀಘ್ರವೇ ಚಿತ್ರೀಕರಣ ಆರಂಭಿಸುತ್ತೇವೆ: ಶಿವರಾಜ್ ಕುಮಾರ್ ಭರವಸೆ
ಚಿತ್ರರಂಗ ಎದುರಿಸುತ್ತಿರುವ ಸಂಕಷ್ಟಗಳು, ಚಿತ್ರೀಕರಣ ನಡೆಯದೆ ಇರುವುದರಿಂದ ಕಾರ್ಮಿಕರು ಅನುಭವಿಸುತ್ತಿರುವ ತೊಂದರೆಗಳು ಹಾಗೂ ಅದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಟ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಕನ್ನಡ ಚಿತ್ರೋದ್ಯಮದ ವಿವಿಧ ವಿಭಾಗಗಳ ಪ್ರಮುಖರು ಶುಕ್ರವಾರ ಸಭೆ ನಡೆಸಿದರು.
Recommended Video
ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಂಬಂಧ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಿಯೋಗವೊಂದು ಸರ್ಕಾರವನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಅದಕ್ಕೂ ಮುನ್ನ ಚಿತ್ರರಂಗದ ಕಾರ್ಮಿಕರಿಗೆ ನೆರವಾಗುವಂತೆ ಕೆಲವು ಪ್ರಮುಖ ಅಂಶಗಳನ್ನು ಚರ್ಚಿಸಿ ಪಟ್ಟಿಮಾಡಲು ನಿರ್ಧರಿಸಲಾಯಿತು.
ಚಿತ್ರರಂಗದ ಮುಂದಾಳತ್ವ ವಹಿಸಿಕೊಳ್ತಾರಾ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್?
ಐದಾರು ತಿಂಗಳಿನಿಂದ ಸಿನಿಮಾ ಚಟುವಟಿಕೆಗಳಿಲ್ಲದೆ ಸಾಮಾನ್ಯ ಕಾರ್ಮಿಕರು, ತಂತ್ರಜ್ಞರು, ಕಲಾವಿದರ ಜೀವನ ಕಷ್ಟದಲ್ಲಿದೆ. ಹೀಗಾಗಿ ಈಗಿನ ಸವಾಲುಗಳ ನಡುವೆ ಮತ್ತೆ ಚಿತ್ರೀಕರಣ ಆರಂಭಿಸಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಕಾರ್ಮಿಕರಿಗೆ ಚಿತ್ರರಂಗ ಮತ್ತು ಸರ್ಕಾರದ ಕಡೆಯಿಂದ ಹೇಗೆ ನೆರವಾಗಬಹುದು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು. ಮುಂದೆ ಓದಿ...
ಎರಡು ಮೂರು ದಿನದಲ್ಲಿ ತೀರ್ಮಾನ
ಚಿತ್ರರಂಗದ ಎಲ್ಲ ವಿಭಾಗದವರೂ ಉದ್ಯಮದ ಕುರಿತು ಚರ್ಚಿಸಲು ಮನೆಗೆ ಬಂದಿರುವುದು ಖುಷಿಯ ಸಂಗತಿ. ಈ ಸಮಯದಲ್ಲಿ ಎಲ್ಲರೂ ಒಟ್ಟಿಗೆ ಬಂದು ಕಷ್ಟಗಳನ್ನು ಹೇಳಿದ್ದಾರೆ. ಅದರಲ್ಲಿ ಮುಖ್ಯವಾಗಿ ಈಗಿನ ಪರಿಸ್ಥಿತಿಯಲ್ಲಿ ಯಾವ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂಬುದನ್ನು ವಾಣಿಜ್ಯ ಮಂಡಳಿಯಲ್ಲಿ ಚರ್ಚಿಸಿ ಎರಡು ಮೂರು ದಿನಗಳಲ್ಲಿ ತೀರ್ಮಾನಿಸುತ್ತೇವೆ ಎಂದು ಶಿವರಾಜ್ ಕುಮಾರ್ ತಿಳಿಸಿದರು.
ಮಾದರಿಯಾದ ಸುದೀಪ್
ಚಿತ್ರರಂಗ ಈಗ ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ಬಗೆಹರಿಸಲು ಏನು ಮಾಡಬೇಕಿದೆ, ಆರ್ಥಿಕವಾಗಿ ಸರ್ವೈವ್ ಆಗಲು ಏನು ಮಾಡಬೇಕು ಎಂಬ ಬಗ್ಗೆ ಚರ್ಚಿಸುತ್ತಿದ್ದೇವೆ. ಈ ವರ್ಷ ಎಷ್ಟು ಸಿನಿಮಾಗಳ ಚಿತ್ರೀಕರಣ ನಡೆಯುತ್ತದೆ ಮತ್ತು ಎಷ್ಟರಮಟ್ಟಿಗೆ ನಡೆಯುತ್ತದೆ ಗೊತ್ತಿಲ್ಲ. ಸುದೀಪ್ ಈಗಾಗಲೇ ಚಿತ್ರೀಕರಣ ಶುರುಮಾಡಿ ಒಳ್ಳೆಯ ಉದಾಹರಣೆ ನೀಡಿದ್ದಾರೆ. ಅವರು ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಮಾದರಿಯಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು ನಾವು ಮುಂದೆ ಸಾಗಬೇಕು ಎಂದರು.
ಶಿವಣ್ಣ ಹುಟ್ಟುಹಬ್ಬಕ್ಕೆ ಸೆಲೆಬ್ರಿಟಿಗಳ ಶುಭಾಶಯ: ಯಾರ್ಯಾರು ಹೇಗೆ ವಿಶ್ ಮಾಡಿದ್ದಾರೆ?
ಈ ಸಂದರ್ಭದಲ್ಲಿ ದುಡುಕಬಾರದು
ಯಾವ ಸಿನಿಮಾವನ್ನು ಯಾವಾಗ ಶುರುಮಾಡಬಹುದು ಎಂಬುದನ್ನು ಕುಳಿತು ಚರ್ಚಿಸಿ ತೀರ್ಮಾನಿಸಿ ನಂತರ ಸರ್ಕಾರದ ಮುಂದೆ ಹೋಗಬೇಕು. ಈ ಸಮಯದಲ್ಲಿ ನಾವು ದುಡುಕಬಾರದು. ದುಡುಕಿ ಅನಾಹುತ ಆಗಬಾರದು. ನಾವೆಲ್ಲ ಕಲಾವಿದರೂ, ನಿರ್ಮಾಪಕರು, ಪ್ರದರ್ಶಕರು, ತಂತ್ರಜ್ಞರು ಎಲ್ಲರೂ ಜತೆಯಾಗಿ ಹೋಗಬೇಕು. ನಾವೆಲ್ಲರೂ ಒಂದೇ ಕುಟುಂಬ. ಯಾರೇ ಆದರೂ ಉದ್ಯಮಕ್ಕಾಗಿ ಫೈಟ್ ಮಾಡಲು ಒದ್ದಾಡುತ್ತಾರೆ. ನಮ್ಮವರು ಯಾರೂ ಮನಸ್ಸಲ್ಲಿ ಏನೋ ಇಟ್ಟುಕೊಂಡು ಮಾಡುವುದಿಲ್ಲ. ನಮ್ಮ ಮಾತಿಗೆ ಗೌರವ ನೀಡುತ್ತಾರೆ. ಅವರ ಪ್ರೀತಿ ವಿಶ್ವಾಸವಿದೆ. ಅದರಂತೆ ಎಲ್ಲರೂ ಜತೆಗೂಡಿ ಬಂದಿದ್ದಾರೆ. ಅವರ ಜತೆಯಲ್ಲಿ ನಾನೂ ಇದ್ದೇನೆ ಎಂದರು.
ನಾವೆಲ್ಲರೂ ಜತೆಯಲ್ಲಿದ್ದೇವೆ
ಈ ಸಮಸ್ಯೆಯನ್ನು ಹೇಗಾದರೂ ಪರಿಹರಿಸಬೇಕು. ಅಮಿತಾಬ್ ಬಚ್ಚನ್ ಒಂದು ವಿಡಿಯೋ ಮೂಲಕ ಇಡೀ ಉದ್ಯಮಕ್ಕೆ ಮಾದರಿಯಾಗಿದ್ದರು. ಹಾಗೆಯೇ ನಾವು ಕನ್ನಡ ಉದ್ಯಮಕ್ಕೆ ಮಾದರಿಯಾಗಬೇಕು. ಯಾರೂ ಬೇರೆ ಯಾವುದೇ ರೀತಿಯ ಆತುರದ ಪ್ರಯತ್ನ ಮಾಡಬೇಡಿ. ನಾವೆಲ್ಲರೂ ಜತೆಯಲ್ಲಿ ಇದ್ದೇವೆ. ಆದಷ್ಟು ಬೇಗ ಶೂಟಿಂಗ್ ಶುರುವಾಗುತ್ತದೆ. ಒಂದೇ ಸಲ ಚಿತ್ರೀಕರಣ ಆರಂಭವಾಗುತ್ತದೆ ಎಂದು ಭರವಸೆ ನೀಡುವುದಿಲ್ಲ. ಹಂತ ಹಂತವಾಗಿ ಶುರುವಾಗಲಿದೆ. ನಾವು ಧೈರ್ಯವಾಗಿ ಎದುರಿಸಬೇಕು. ಕೊರೊನಾ ದೊಡ್ಡ ವಿಷಯವಲ್ಲ. ನಾವು ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಆಗ ಕೊರೊನಾದಿಂದ ಏನೂ ಮಾಡಲು ಆಗೊಲ್ಲ. ಸರ್ಕಾರದ ಜತೆಯಾಗಿ ಸಾಗೋಣ. ಎಲ್ಲರೂ ಖುಷಿಯಾಗಿರಿ ಎಂದು ಶಿವರಾಜ್ ಕುಮಾರ್ ಚಿತ್ರರಂಗದ ಕಾರ್ಮಿಕರು, ಕಲಾವಿದರು ಮತ್ತು ತಂತ್ರಜ್ಞರಿಗೆ ಧೈರ್ಯ ತುಂಬಿದ್ದಾರೆ.