Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಬರ್ಲಿಲ್ಲ ; ಶಿವಣ್ಣ, ಸರೋಜ ದೇವಿ ಕಾಯ್ಲಿಲ್ಲ..!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಇಂದು ಮಹತ್ವದ ಸಭೆ ನಡೆಯಬೇಕಿತ್ತು. ಕಳೆದ ಒಂದು ವಾರದಿಂದ ಪ್ರತಿಭಟನೆಯಲ್ಲಿ ನಿರತರಾಗಿದ್ದ ನಿರ್ಮಾಪಕರ ಸಮಸ್ಯೆ ಕುರಿತು ಚರ್ಚಿಸುವುದಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಇಂದು ಕಲಾವಿದರ ಸಂಘದ ಸಭೆ ಕರೆದಿದ್ದರು.
ಅಂಬಿ ದನಿಗೆ ಓಗೊಟ್ಟು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಹಿರಿಯ ನಟಿ ಸರೋಜ ದೇವಿ, ಜಯಮಾಲಾ, ನವರಸ ನಾಯಕ ಜಗ್ಗೇಶ್, ಕೋಮಲ್, ಹಿರಿಯ ನಟ ಶ್ರೀನಾಥ್ ಸೇರಿದಂತೆ ಕಲಾವಿದರ ದಂಡೇ ವಾಣಿಜ್ಯ ಮಂಡಳಿಯಲ್ಲಿ ನೆರೆದಿತ್ತು. [ನಿರ್ಮಾಪಕರ ಸತ್ಯಾಗ್ರಹದ ಬಗ್ಗೆ ಶಿವಣ್ಣ ಕೊಟ್ಟ ಉತ್ತರ ಇದು!]
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಮ್ಮುಖದಲ್ಲಿ ಕಲಾವಿದರ ಸಂಘದ ಸಭೆ ನಿಗದಿಯಾಗಿದ್ದು ಇಂದು ಸಂಜೆ 4 ಗಂಟೆಗೆ. ಆದ್ರೆ, ಗಂಟೆ ಆರು ಆದರೂ, ಕಲಾವಿದರ ಸಂಘದ ಅಧ್ಯಕ್ಷ ರೆಬೆಲ್ ಸ್ಟಾರ್ ಅಂಬರೀಶ್ ಪತ್ತೆಯಾಗ್ಲಿಲ್ಲ. [ಧರಣಿ ನಿರತ ನಿರ್ಮಾಪಕರ ಭವಿಷ್ಯ ಇಂದು ಅಂಬರೀಷ್ ಕೈಯಲ್ಲಿ!]
4 ಗಂಟೆಯಿಂದ ಕಾದು ಕಾದು ಸುಸ್ತಾದ ಅನೇಕ ಕಲಾವಿದರು ಬೇಸೆತ್ತು ಸಭೆ ನಡೆಸದೆ ಹೊರನಡೆದಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್, ಹಿರಿಯ ನಟಿ ಸರೋಜ ದೇವಿ ಮತ್ತು ನಟಿ ಜಯಮಾಲಾ ವಾಣಿಜ್ಯ ಮಂಡಳಿಯಿಂದ ನಿರ್ಗಮಿಸಿದ್ದಾರೆ. [ನಿರ್ಮಾಪಕರು ರೊಚ್ಚಿಗೇಳುವುದಕ್ಕೆ 'ಇವರುಗಳೇ' ಕಾರಣ.!]
ಸಭೆ ಕರೆದವರಿಗೆ ಸಮಯಪ್ರಜ್ಞೆ ಇಲ್ಲದಿರುವುದಕ್ಕೆ ಬೇಸೆತ್ತ ಅನೇಕ ಕಲಾವಿದರು ಮನೆ ಕಡೆ ಮುಖ ಮಾಡುತ್ತಿದ್ದಾರೆ. ಮುಂದೇನೋ...ದೇವರೇ ಬಲ್ಲ..!