Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರ್ಯವರ್ಧನನ ಅನುಗೆ ಖುಲಾಯಿಸಿದ ಅದೃಷ್ಟ, ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ
ಜನಪ್ರಿಯ ಧಾರಾವಾಹಿಯ ಜೊತೆ-ಜೊತೆಯಲಿ ನಾಯಕ ನಟಿ ಅನು ಪಾತ್ರಧಾರಿ ಮೇಘಾ ಶೆಟ್ಟಿಗೆ ಅದೃಷ್ಟ ಖುಲಾಯಿಸಿದೆ.
Recommended Video
ನಟಿಯಾಗಿ ಗುರುತಿಸಿಕೊಂಡ ಕಡಿಮೆ ಅವಧಿಯಲ್ಲಿಯೇ ಅವರಿಗೆ ಕಿರುತೆರೆಯಿಂದ ಬೆಳ್ಳಿತೆರೆಗೆ ಬಡ್ತಿ ದೊರೆತಿದೆ. ಸ್ಟಾರ್ ನಟನ ಎದುರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಮೇಘ ಶೆಟ್ಟಿ.
'ತ್ರಿಬಲ್ ರೈಡಿಂಗ್' ಆರಂಭಿಸಿದ ಗೋಲ್ಡನ್ ಸ್ಟಾರ್ ಗಣೇಶ್
ಗೋಲ್ಡನ್ ಸ್ಟಾರ್ ನಾಯಕನಾಗಿ ನಟಿಸುತ್ತಿರುವ ಮುಂದಿನ ಸಿನಿಮಾ 'ತ್ರಿಬಲ್ ರೈಡ್' ಸಿನಿಮಾದಲ್ಲಿ ನಾಯಕಿ ಪಾತ್ರದಲ್ಲಿ ಮೇಘ ಶೆಟ್ಟಿ ನಟಿಸುತ್ತಿದ್ದಾರೆ. ಸುದ್ದಿಯನ್ನು ಚಿತ್ರತಂಡ ಹಂಚಿಕೊಂಡಿದೆ.
ಹಿರಿತೆರೆಗೆ ಲಗ್ಗೆ ಇಟ್ಟ ಮೇಘ ಶೆಟ್ಟಿ
'ಜೊತೆ-ಜೊತೆಯಲಿ' ಧಾರಾವಾಹಿಯು ಮೇಘಾ ಶೆಟ್ಟಿ ಅವರ ಮೊದಲ ಧಾರಾವಾಹಿ ಆಗಿದೆ. ಮೊದಲ ಧಾರಾವಾಹಿಯೇ ಮೇಘಾ ಶೆಟ್ಟಿಗೆ ದೊಡ್ಡ ಹೆಸರು ತಂದುಕೊಟ್ಟಿದ್ದು, ಹಿರಿತೆರೆಗೆ ಲಗ್ಗೆ ಇಡಲಿದ್ದಾರೆ.
ರಗಡ್ ಸಿನಿಮಾ ನಿರ್ದೇಶಿಸಿದ್ದ ಮಹೇಶ್ ಗೌಡ
ತ್ರಿಬಲ್ ರೈಡ್ ಸಿನಿಮಾವನ್ನು ರಗಡ್ ಸಿನಿಮಾ ನಿರ್ದೇಶಿಸಿದ್ದ ಮಹೇಶ್ ಗೌಡ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಕೆಲಸ ಪ್ರಾರಂಭವಾಗಿದ್ದು, ಹೈದರಾಬಾದ್ನಲ್ಲಿ ಹಾಡುಗಳ ರೆಕಾರ್ಡಿಂಗ್ ಮಾಡಲಾಗುತ್ತಿದೆ.
ತೆಲುಗು ಬಿಗ್ಬಾಸ್: ಸ್ಪರ್ಧಿಯೊಬ್ಬರ ಅಪಹರಣ, ಮನೆಯೊಳಗೆ ಸಖತ್ ಹೈಡ್ರಾಮಾ
ರಾಮ್ ಗೋಪಾಲ್ ನಿರ್ಮಾಪಕ
ಲವ್, ಕಾಡಿಮಿ, ಆಕ್ಷನ್ ಮತ್ತು ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಕತೆ ತ್ರಿಬಲ್ ರೈಡ್ ಸಿನಿಮಾದ್ದಾಗಿದೆ. ಈ ಸಿನಿಮಾವನ್ನು ರಾಮ್ ಗೋಪಾಲ್ ನಿರ್ಮಿಸುತ್ತಿದ್ದಾರೆ. ಸಿನಿಮಾಕ್ಕೆ ಕಾರ್ತಿಕ್ ಸಂಗೀತ ನೀಡಲಿದ್ದಾರೆ. ಸಿನಿಮಾದಲ್ಲಿ ರವಿಶಂಕರ್, ಚಿಕ್ಕಣ್ಣ ಸೇರಿ ಇನ್ನೂ ಹಲವು ನಟರಿದ್ದಾರೆ.
ಧಾರಾವಾಹಿ ಕತೆ ಏನು?
ಮೇಘ ಶೆಟ್ಟಿ ಸಿನಿಮಾಕ್ಕೆ ಹೋದರೆ ಧಾರಾವಾಹಿ ಕತೆ ಏನು? ಎಂಬ ಅನುಮಾನ ಪ್ರಾರಂಭವಾಗಿದೆ. ಆದರೆ ಧಾರಾವಾಹಿ ಚಿತ್ರೀಕರಣಕ್ಕೆ ಧಕ್ಕೆ ಆಗದ ರೀತಿಯಲ್ಲಿ ಮೇಘ ಶೆಟ್ಟಿ ನಿಭಾಯಿಸಲಿದ್ದಾರೆ ಎನ್ನಲಾಗುತ್ತಿದೆ. ಅಥವಾ ಕತೆಯಲ್ಲಿ ಕೆಲ ದಿನಗಳ ಕಾಲ ಬದಲಾವಣೆ ತರುವ ಸಾಧ್ಯತೆಯೂ ಇದೆ.