Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟನೆಗೆ ಮರಳಿದ ಮೇಘನಾ ರಾಜ್, ಗೆಳೆಯನದ್ದೇ ನಿರ್ಮಾಣ
ನಟಿ ಮೇಘನಾ ರಾಜ್ ಇದೀಗ ಮತ್ತೆ ಸಿನಿಮಾ ನಟನೆಯತ್ತ ಮರಳಿದ್ದಾರೆ. ಮೇಘನಾ ನಟಿಸುತ್ತಿರುವ ಹೊಸ ಚಿರಂಜೀವಿ ಸರ್ಜಾ ಹುಟ್ಟುಹಬ್ಬದಂದು ಸೆಟ್ಟೇರಲಿದೆ.
ವಿಶೇಷವೆಂದರೆ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ಮೇಘನಾ ರಾಜ್ ಆತ್ಮೀಯ ಗೆಳೆಯ ಪನ್ನಗಾಭರಣ. ಅವರ ನಿರ್ಮಾಣದ ಮೊದಲ ಸಿನಿಮಾ ಇದು. ಪನ್ನಗಾಭರಣಗೆ ಚಿರು ಸರ್ಜಾ ಜೊತೆಗೆ ಸಿನಿಮಾ ಮಾಡಬೇಕೆಂಬ ಆಸೆ ಇತ್ತಂತೆ ಆದರೆ ಅದು ಸಾಧ್ಯವಾಗಲಿಲ್ಲ. ಈಗ ಮೇಘನಾ ರಾಜ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.
ಸಿನಿಮಾವನ್ನು ಅಧಿಕೃತವಾಗಿ ಘೋಷಿಸಿರುವ ಪನ್ನಗಾಭರಣ, ಮೇಘನಾ ರಾಜ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಮತ್ತು ವಿಶಾಲ್ ಹೆಸರಿನ ಹೊಸಬರು ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದಾಗಿ ಹೇಳಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡುತ್ತಿರುವುದು ವಾಸುಕಿ ವೈಭವ್.
''ಚಿರಂಜೀವಿ ಸರ್ಜಾ ಜೊತೆಗೆ ಸಿನಿಮಾ ಮಾಡಬೇಕೆಂಬ ಆಸೆಯಿತ್ತು. ಆಗಲಿಲ್ಲ, ಈಗ ಮೇಘನಾ ರಾಜ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನ (ಅಕ್ಟೋಬರ್ 17) ರಂದು ಸಿನಿಮಾದ ಮುಹೂರ್ತ ನಡೆಯಲಿದ್ದು, ಮುಹೂರ್ತ ಸಮಾರಂಭಕ್ಕೆ ಟಿ.ಎಸ್.ನಾಗಾಭರಣ, ಸುಂದರ್ ಇನ್ನು ಕೆಲವು ಹಿರಿಯ ನಟರು ಆಗಮಿಸಲಿದ್ದಾರೆ'' ಎಂದು ಪನ್ನಗಾಭರಣ ಮಾಹಿತಿ ನೀಡಿದ್ದಾರೆ.
ಚಿರು ಸರ್ಜಾ ಕಾಲವಾದ ಬಳಿಕ ಮೇಘನಾ ರಾಜ್ ಯಾವ ಸಿನಿಮಾದಲ್ಲಿಯೂ ನಟಿಸಿಲ್ಲ. ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಆದರೆ ಸಿನಿಮಾ ನಟನೆಯಿಂದ ದೂರ ಉಳಿದಿದ್ದರು. ಮಗುವಿನ ಆರೈಕೆ ಸಹ ಮಾಡಬೇಕಾಗಿದ್ದ ಕಾರಣ ಸಿನಿಮಾದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ಸಿನಿಮಾಕ್ಕೆ ಮರಳುತ್ತಿದ್ದಾರೆ ಮೇಘನಾ ರಾಜ್.
2019 ರಲ್ಲಿ ಬಿಡುಗಡೆ ಆದ 'ಕುರುಕ್ಷೇತ್ರ' ಸಿನಿಮಾದ ಬಳಿಕ ಇನ್ನಾವುದೇ ಮೇಘನಾ ರಾಜ್ ನಟಿಸಿರುವ ಇನ್ನಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.