Don't Miss!
- News ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಅಪಪ್ರಚಾರ:ಕೆ ಸುಧಾಕರ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿರುಪತಿ ತಿಮ್ಮಪ್ಪನಿಗೆ ಹರಕೆ ತೀರಿಸಿದ ಮೇಘನಾ ತಂದೆ ಸುಂದರ್ ರಾಜ್
ನಟಿ ಮೇಘನಾ ರಾಜ್ ಅವರ ತಂದೆ ಸುಂದರ್ ರಾಜ್ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಚಿರು ನಿಧನದ ಬಳಿಕ ಕಟ್ಟಿಕೊಂಡಿದ್ದ ಹರಿಕೆಯನ್ನು ಈಡೇರಿಸಿದ್ದಾರೆ.
ಚಿರಂಜೀವಿ ಸರ್ಜಾ ಸಾವಿನ ಬಳಿಕ ತನ್ನ ಮಗಳಿಗೆ ಏನು ತೊಂದರೆಯಾಗದಂತೆ, ಆರೋಗ್ಯವಾಗಿ ಹೆರಿಗೆ ಆಗಲಿ ಎಂದು ತಿರುಪತಿ ತಿಮ್ಮಪ್ಪನಿಗೆ ಹರಿಕೆ ಕಟ್ಟಿಕೊಂಡಿದ್ದರಂತೆ. ಹರಿಕೆ ಈಡೇರಿಸಲು ತಿರುಪತಿಗೆ ಭೇಟಿ ನೀಡಿದ ಸುಂದರ್ ರಾಜ್ ತಮ್ಮ ಮುಡಿ ಅರ್ಪಿಸಿದ್ದಾರೆ.
ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮೇಘನಾ ರಾಜ್
''ತಿರುಪತಿ ತಿಮ್ಮಪ್ಪ ನಮ್ಮ ಕುಟುಂಬದ ನೆಚ್ಚಿನ ದೇವರ. ನಮ್ಮ ತಾಯಿ ಪ್ರತಿ ವಿಚಾರಕ್ಕೆ ಬಾಲಾಜಿ, ಶ್ರೀನಿವಾಸ ಎಂದು ಪ್ರಾರ್ಥಿಸುತ್ತಿದ್ದರು. ನಾನು ಅಷ್ಟೇ ನಂಬಿದ್ದೇನೆ. ನಂಬಿದವರ ಕೈ ಬಿಡಲ್ಲ. ಮಗಳು-ಮೊಮ್ಮಗ ಆರೋಗ್ಯವಾಗಿದೆ'' ಎಂದು ಸುಂದರ್ ರಾಜ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ನಟ ಚಿರಂಜೀವಿ ಸರ್ಜಾ ಅವರ ಜೂನ್ 7 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಗರ್ಭಿಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ 22 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.
Recommended Video
ಚಿರು ಸರ್ಜಾ ಅವರನ್ನು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಹಾಗೂ ಸುಂದರ್ ರಾಜ್ ಕುಟುಂಬದಲ್ಲಿ, ಮಗುವಿನ ಆಗಮನದಿಂದ ಸಂತಸ ಹಿಂತಿರುಗಿತ್ತು.