Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುರ್ಯೋಧನ ದರ್ಶನ್ ಮಡದಿ ಭಾನುಮತಿ ಲುಕ್ ಬಹಿರಂಗ
'ಕುರುಕ್ಷೇತ್ರ' ಸಿನಿಮಾದಲ್ಲಿ ದುರ್ಯೋಧನ ಮಡದಿ ಭಾನುಮತಿ ಪಾತ್ರದಲ್ಲಿ ನಟಿ ಮೇಘನಾ ರಾಜ್ ನಟಿಸುತ್ತಿರುವ ಸುದ್ದಿ ಇತ್ತೀಚಿಗಷ್ಟೆ ಹೊರಬಂದಿತ್ತು. ಅದೇ ರೀತಿ ಇದೀಗ ಚಿತ್ರದ ಶೂಟಿಂಗ್ ನಲ್ಲಿ ಮೇಘನಾ ಭಾಗಿಯಾಗಿದ್ದಾರೆ.
ಕುರುಕ್ಷೇತ್ರದ 'ಬಿಗ್' ನ್ಯೂಸ್: ದರ್ಶನ್ ಗೆ ಕನ್ನಡದ ಸ್ಟಾರ್ ನಟಿ ನಾಯಕಿ.!
ಚಿತ್ರೀಕರಣದ ವೇಳೆ ನಟ ದರ್ಶನ್ ಮತ್ತು ಅರ್ಜುನ್ ಸರ್ಜಾ ಜೊತೆ ಮೇಘನಾ ಒಂದು ಫೋಟೋ ತೆಗೆದುಕೊಂಡಿದ್ದಾರೆ. ಈ ಫೋಟೋ ಮೂಲಕ ಚಿತ್ರದಲ್ಲಿ ಭಾನುಮತಿಯ ಲುಕ್ ಹೇಗಿರುತ್ತದೆ ಎನ್ನುವ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಭಾನುಮತಿಯಾಗಿರುವ ಮೇಘನಾ ಲುಕ್ ಇದೀಗ ಬಹಿರಂಗವಾಗಿದೆ. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ದರ್ಶನ್ ಜೊತೆ ಮೇಘನಾ ನಟಿಸುತ್ತಿದ್ದಾರೆ.
ಈ ಮೊದಲು ಚಿತ್ರದ ಭಾನುಮತಿ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿಯರಾದ ರೆಜಿನಾ ಮತ್ತು ರಮ್ಯಾ ನಂಬಿಸೇನ್ ಆಯ್ಕೆ ಆಗಿದ್ದರು ಎನ್ನಲಾಗಿತ್ತು. ಆದ್ರೀಗ, ಅವರಿಬ್ಬರ ಬದಲು ಮೇಘನಾ ಅವಕಾಶ ಪಡೆದುಕೊಂಡಿದ್ದಾರೆ. ಈ ಹಿಂದೆ 'ಅಲ್ಲಮ' ಚಿತ್ರದಲ್ಲಿ ಪೌರಾಣಿಕ ಪಾತ್ರ ಮಾಡಿದ್ದ ಮೇಘನಾ ಈಗ ಮತ್ತೆ ಅದೇ ರೀತಿಯ ಮಹತ್ವದ ಪಾತ್ರವನ್ನು ಮಾಡುತ್ತಿದ್ದಾರೆ.