Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಇಂದ್ರಜಿತ್ ಕ್ಷಮೆ ಕೇಳಲಿ': ಫಿಲಂ ಚೇಂಬರ್ಗೆ ಪತ್ರ ಬರೆದ ನಟಿ ಮೇಘನಾ ರಾಜ್
ಡ್ರಗ್ಸ್ ಪ್ರಕರಣದಲ್ಲಿ ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಹೆಸರು ತಂದಿದ್ದಕ್ಕಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಹಲವರು ಬೇಸರ ವ್ಯಕ್ತಪಡಿಸಿದ್ದರು. ಸತ್ತ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ ಎಂದು ನಟ ದರ್ಶನ್, ಸುದೀಪ್ ಸೇರಿದಂತೆ ಹಲವರು ಖಂಡಿಸಿದ್ದರು.
Recommended Video
ಈವರೆಗೂ ಚಿರು ಸರ್ಜಾ ಕುಟುಂಬದವರು ಈ ಬಗ್ಗೆ ಬಹಿರಂಗವಾಗಿ ಮಾತನಾಡಿರಲಿಲ್ಲ. ಆದ್ರೀಗ, ಚಿರು ಸರ್ಜಾ ಪತ್ನಿ ನಟಿ ಮೇಘನಾ ರಾಜ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ''ನನ್ನ ಗಂಡನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕ ಕ್ಷಮೆ ಕೇಳಲಿ'' ಎಂದು ವಿನಂತಿಸಿಕೊಂಡಿದ್ದಾರೆ. ಹಾಗಾದ್ರೆ, ಮೇಘನಾ ಬರೆದ ಪತ್ರದಲ್ಲಿ ಏನಿದೆ? ಮುಂದೆ ಓದಿ...
ಆಧಾರ ರಹಿತ ಆರೋಪಗಳು
''ನನ್ನ ಪತಿ ಚಿರಂಜೀವಿ ಸರ್ಜಾ ನಮ್ಮನ್ನಗಲಿ ಇನ್ನು ಮೂರು ತಿಂಗಳು ಕಳೆದಿಲ್ಲ. ಇಡೀ ನಮ್ಮ ಸಂಸಾರ ಆ ದುಃಖದಿಂದ ಹೊರಬರುವಷ್ಟರಲ್ಲೇ ಆಧಾರರಹಿತವಾದ ಆಪಾದನೆಗಳನ್ನು ಮತ್ತು ದುರುದ್ದೇಶಪೂರ್ವಕವಾಗಿ ಹೇಳಿಕೆಗಳನ್ನು ನನ್ನ ದಿವಂಗತ ಪತಿಯ ಮೇಲೆ ಇಂದ್ರಜಿತ್ ಲಂಕೇಶ್ ವರಿಸುತ್ತಿದ್ದಾರೆ.'' ಎಂದು ಮೊದಲ ಪ್ರತಿಕ್ರಿಯಿಸಿದ್ದಾರೆ.
ಅತೀವ ವೇದನೆ ಉಂಟು ಮಾಡಿದೆ
''ನನ್ನ ದಿವಂಗತ ಪತಿಯ ಅಕಾಲಿಕ ಮರಣದ ಬಗೆಗಿನ ಅವಹೇಳನಕಾರಿ ಹಾಗೂ ಪ್ರಚೋದಿತ ಆಪಾದನೆಗಳಿಂದ ನನಗೆ ಮತ್ತು ನನ್ನ ಇಡೀ ಕುಟುಂಬಕ್ಕೆ ಮಾನಸಿಕವಾಗಿ ಅತೀವ ವೇದನೆ ಉಂಟು ಮಾಡಿರುತ್ತದೆ. ಗರ್ಭಾವತಿಯಾಗಿರುವ ನನ್ನನ್ನು ಈ ರೀತಿಯ ಮಾನಸಿಕ ತೊಳಲಾಟಕ್ಕೆ ತಳ್ಳುವುದು ಅತೀವವಾದ ಅವಮಾನವೀಯ ಕೃತ್ಯ'' ಎಂದು ಬೇಸರವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಬಗ್ಗೆಯೂ ಅಸಮಾಧಾನ
''ವಾರ್ತಾ ಮತ್ತು ದೃಶ್ಯ ಮಾಧ್ಯಮಗಳು ಯಾವುದೇ ರೀತಿಯ ಆಧಾರ ಹೊಂದದೆ ಇದ್ದರೂ ಮಾದಕ ವಸ್ತುಗಳ ಸುದ್ದಿಯ ಜೊತೆ ಜೊತೆಗೆ, ನಿರಾಧಾರ ಸುದ್ದಿ ಪ್ರಸಾರ ಮಾಡುವ ಮೂಲಕ ನಮ್ಮನಗಲಿದ ಆತ್ಮವೊಂದರ ನೆನಪಿಗೂ ಮಸಿ ಬಳಿಯಲಾಗುತ್ತದೆ. ಇದೆಲ್ಲ ಇಂದ್ರಜಿತ್ ಲಂಕೇಶ್ ಅವರ ಬೇಜವಾಬ್ದಾರಿಯಿಂದ ನಡೆದಿರುವುದು. ಮಾಧ್ಯಮದ ಬಗ್ಗೆ ನನಗೆ ಅತೀವವಾದ ಗೌರವವಿದೆ. ಆದರೆ, ಅವರು ಈ ಪ್ರಕರಣವನ್ನು ಪರಿಗಣಿಸಿದ ರೀತಿ ಮತ್ತು ನನ್ನ ಪತಿಯ ಹೆಸರು ಮತ್ತು ಫೋಟೋಗಳನ್ನು ಬಳಸಿದ ರೀತಿಗೆ ನಿರಾಸೆ ಉಂಟಾಗಿದೆ'' ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸಾರ್ವಜನಿಕ ಕ್ಷಮೆಯಾಚಿಸಲಿ
''ಇಂದ್ರಜಿತ್ ಲಂಕೇಶ್ ಅವರ ಈ ರೀತಿಯ ನಡವಳಿಕೆಯಿಂದ ನನಗೆ ಉಂಟಾಗಿರುವ ಮಾನಸಿಕ ವೇದನೆಯನ್ನು ತೋಡಿಕೊಳ್ಳಲು ಯಾವುದೇ ಶಬ್ದಗಳು ಸಿಗದಂತಾಗಿದೆ. ನನಗೆ ಮತ್ತು ನನ್ನ ಕುಟುಂಬದವರಿಗೆ ಬೇಕಾಗಿರುವುದು ಇಂದ್ರಜಿತ್ ಲಂಕೇಶ್ ಅವರ ಬೇಷರತ್ ಸಾರ್ವಜನಿಕ ಕ್ಷಮೆಯಾಚನೆ'' ಎಂದು ವಿನಂತಿಸಿಕೊಂಡಿದ್ದಾರೆ. ಮೇಘನಾ ರಾಜ್ ಅವರ ಪತ್ರದ ಹಿನ್ನೆಲೆ ಇಂದ್ರಜಿತ್ ಅವರಿಗೆ ವಾಣಿಜ್ಯ ಮಂಡಳಿ ಕಡೆಯಿಂದ ಪತ್ರ ಬರೆಯಲು ನಿರ್ಧರಿಸಲಾಗಿದೆ.