Don't Miss!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಪಿಗೆ ಚಿತ್ರಮಂದಿರದಲ್ಲಿ ತಮಿಳು ನಟ ವಿಜಯ್ ಸಿನಿಮಾ ಪ್ರದರ್ಶನ ರದ್ದು.!
ಬೆಂಗಳೂರಿನ ಸಂಪಿಗೆ ಚಿತ್ರಮಂದಿರದ ಬಳಿ ಕನ್ನಡಿಗರ ಮೇಲೆ ತಮಿಳು ನಟ ವಿಜಯ್ ಅಭಿಮಾನಿಗಳಿಂದ ಹಲ್ಲೆಗೆ ಸಂಬಂಧಿಸಿದಂತೆ ಈಗ 'ಮೆರ್ಸಲ್' ಚಿತ್ರದ ಪ್ರದರ್ಶನ ರದ್ದುಗೊಳಿಸಲಾಗಿದೆ.
ನಿನ್ನೆ (ಅಕ್ಟೋಬರ್ 17) ರಂದು ವಿಜಯ್ ಸಿನಿಮಾ ಬಿಡುಗಡೆ ಹಿನ್ನೆಲೆ ಚಿತ್ರಮಂದಿರದ ಎದುರು ಕಟೌಟ್ ಹಾಕಲಾಗುತ್ತಿದ್ದ ವೇಳೆ, ರಸ್ತೆಯಲ್ಲಿ ಚಲಿಸುತ್ತಿದ್ದ ಇಬ್ಬರು ಕನ್ನಡಿಗರು ಕಟೌಟ್ ನ ನೋಡಿದ್ದಾರೆ. ಈ ಕಾರಣಕ್ಕೆ ''ನಮ್ಮ ಬಾಸ್ ಕಟೌಟ್''ನ ತಲೆಎತ್ತಿ ನೋಡ್ತೀರಾ ಎಂದು ಹೇಳಿ ತಮಿಳಿಗರು ದೈಹಿಕ ಹಲ್ಲೆ ಮಾಡಿದ್ದರು.
ಕನ್ನಡಿಗರ ಮೇಲೆ ಹಲ್ಲೆ: 'ಮೆರ್ಸಲ್' ಚಿತ್ರಕ್ಕೆ ಬಿಸಿ ಮುಟ್ಟಿಸಿದ ಹೋರಾಟಗಾರರು.!
ಇದಾದ ಬಳಿಕ ಇಂದು ಬೆಳಿಗ್ಗೆ ಸಾರಾ ಗೋವಿಂದು, ಪ್ರವೀಣ್ ಶೆಟ್ಟಿ, ಶಿವರಾಮೇ ಗೌಡ ಸೇರಿದಂತೆ ಹಲವು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದ್ದರು. ಬೆಳಿಗ್ಗೆ ಶೋ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿತ್ತಾದರೂ, ಮಧ್ಯಾಹ್ನದ ನಂತರ 'ಮೆರ್ಸಲ್' ಪ್ರದರ್ಶನ ರದ್ದುಗೊಳಿಸಲಾಗಿದೆ.
ತಮಿಳು ನಟ ವಿಜಯ್ ಅಭಿಮಾನಿಗಳಿಂದ ಕನ್ನಡಿಗರ ಮೇಲೆ ಹಲ್ಲೆ.!
ತದ ನಂತರ ಚಿತ್ರಮಂದಿರಕ್ಕೆ ವಾಟಳ್ ನಾಗರಾಜ್ ಕೂಡ ಭೇಟಿ ಕೊಟ್ಟು ಈ ಹಲ್ಲೆ ಮಾಡಿದವರು ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನ ಬಂಧಿಸಿದೇ ಇದಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.