Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್
ರಾಜಕಾರಣಿಗಳು ಆಗಾಗ ಬಣ್ಣಬದಲಾಯಿಸುವುದು ಗೊತ್ತೇ ಇದೆ. ಈಗಾಗಲೆ ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವಾರು ರಾಜಕಾರಣಿಗಳು ಬಣ್ಣ ಹಚ್ಚಿದ್ದಾರೆ. ಸಿನಿಮಾದವರು ರಾಜಕೀಯಕ್ಕೂ, ರಾಜಕೀಯದವರು ಬಣ್ಣದ ಜಗತ್ತಿಗೆ ಅಡಿಯಿಡುವುದು ಸರ್ವೇಸಾಮಾನ್ಯವಾಗಿದೆ.
ಈಗ ರಾಜ್ಯ ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ. ಅವರು ನಟಿಸುತ್ತಿರುವುದು ಕನ್ನಡ ಚಿತ್ರದಲ್ಲಿ ಅಲ್ಲವೇ ಅಲ್ಲ. ತುಳು ಭಾಷೆಯ 'ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ' ಎಂಬ ಭಕ್ತಿಪ್ರಧಾನ ಚಿತ್ರದಲ್ಲಿ.
ಏಪ್ರಿಲ್, 2014ರಲ್ಲಿ ತೆರೆಕಾಣಲಿರುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ನಾಯಕನಟ ರಾಜೇಶ್ ಕೋಟ್ಯಾನ್. ಜೊತೆಗೆ ಚಿತ್ರದ ನಿರ್ಮಾಣ, ಸಾಹಸ ನಿರ್ದೇಶನದ ಜವಾಬ್ದಾರಿಯನ್ನೂ ರಾಜೇಶ್ ಹೊತ್ತಿದ್ದಾರೆ. ಈ ಚಿತ್ರವನ್ನು ಏಪ್ರಿಲ್ ನಲ್ಲಿ ತೆರೆಗೆ ತರುವ ಸಿದ್ಧತೆಗಳು ನಡೆಯುತ್ತಿವೆ.
ಕಿರುತೆರೆ ನಟ ವೆಂಕಟಾದ್ರಿ ಅಚರು ಬ್ರಹ್ಮಶ್ರೀ ನಾರಾಯಣ ಗುರುಗಳಾಗಿ ಅಭಿನಯಿಸಲಿದ್ದಾರೆ. ಉಳಿದ ಪಾತ್ರವರ್ಗದಲ್ಲಿ ಚಿನ್ನಾಮುತ್ತ ವಿಜಯ್, ಭೂಮಿಕಾ, ಸಂಗೀತಾ ಶೆಟ್ಟಿ, ಭೂಜರಾಜ್ ವಾಮಂಜೂರು, ಅರವಿಂದ ಬೋಳಾರ್ ಸೇರಿದಂತೆ ಮುಂತಾದವರಿದ್ದಾರೆ. (ಏಜೆನ್ಸೀಸ್)