Don't Miss!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಚಿವ ಸುಧಾಕರ್ ನಟಿಸುತ್ತಿದ್ದಾರೆ ಈ ಕನ್ನಡ ಸಿನಿಮಾದಲ್ಲಿ!
ರಾಜಕಾರಣಕ್ಕೂ ಸಿನಿಮಾ ರಂಗಕ್ಕೂ ಬಹು ಆತ್ಮೀಯತೆ. ಸಿನಿಮಾ ರಂಗದವರು ರಾಜಕಾರಣಿಗಳಾಗುವುದು ಹೊಸತೇನಲ್ಲ. ರಾಜಕಾರಣಿಗಳಿಗೆ 'ನಟನೆ' ಹೊಸತಲ್ಲ. ಆದರೆ ರಾಜಕಾರಣಿಗಳಾಗಿರುವವರು ಸಿನಿಮಾದಲ್ಲಿ ನಟಿಸುವುದು ತುಸು ಅಪರೂಪ.
ಕನ್ನಡದಲ್ಲಿ ರಾಜಕಾರಣಿಗಳಾಗಿದ್ದವರು ಸಿನಿಮಾಗಳಲ್ಲಿ ನಟಿಸಿರುವ ಉದಾಹರಣೆ ತುಸು ಕಡಿಮೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಟಿ.ಎನ್.ಸೀತಾರಾಮ್ ಅವರ ಧಾರಾವಾಹಿಯಲ್ಲಿ ನಟಿಸಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಮೇಲೆ ಸಿನಿಮಾ ಒಂದರಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
ಇದೀಗ ಸಚಿವ ಸುಧಾಕರ್ ಅವರು ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾದ ಪೋಸ್ಟರ್ ಅನ್ನು ಇಂದು ಸಿಎಂ ಯಡಿಯೂರಪ್ಪ ಬಿಡುಗಡೆ ಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಸುಧಾಕರ್, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್. ಹಾಜರಿದ್ದರು.
'ತನುಜಾ' ಹೆಸರಿನ ಸಿನಿಮಾ ಒಂದರಲ್ಲಿ ಸಚಿವ ಕೆ.ಸುಧಾಕರ್ ನಟಿಸಲಿದ್ದಾರೆ. 'ತನುಜಾ' ನಿಜಜೀವನದ ಘಟನೆಯಿಂದ ಪ್ರೇರಣೆಗೊಂಡ ಸಿನಿಮಾ. ಕೆಲವೇ ತಿಂಗಳ ಹಿಂದೆ ನಡೆದ ಘಟನೆಯೊಂದನ್ನು ಸಿನಿಮಾ ಮಾಡುತ್ತಿದ್ದಾರೆ ಹರೀಶ್.
Recommended Video
ಸಿನಿಮೀಯ ರೀತಿಯಲ್ಲಿ ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಪ್ರತಿಭಾವಂತ ವಿದ್ಯಾರ್ಥಿನಿ ಶಿಕಾರಿಪುರದ, ಮಲ್ಲೇನಹಳ್ಳಿ ಗ್ರಾಮದ ತನುಜಾ ಕುರಿತಾದ ಸಿನಿಮಾ ಇದಾಗಿದೆ. ಕೊರೊನಾ ಕಾರಣದಿಂದ ಒಂದು ಬಾರಿ ನೀಟ್ ಪರೀಕ್ಷೆ ವಂಚಿತಳಾಗಿದ್ದ ತನುಜಾ, ಎರಡನೇ ಅವಕಾಶದಲ್ಲಿ ಶಿಕ್ಷಕ ಪ್ರದೀಪ್, ಸಂಪಾದಕ ವಿಶ್ವೇಶ್ವರ ಭಟ್, ಸಿಎಂ ಯಡಿಯೂರಪ್ಪ, ಸಚಿವ ಸುಧಾಕರ್, ಬಿಜೆಪಿ ಮುಖಂಡ ಬಿವೈ ವಿಜಯೇಂದ್ರ ಇವರೆಲ್ಲರುಗಳ ಸಹಾಯದಿಂದ ಸಮಯಕ್ಕೆ ಸರಿಯಾಗಿ ನೀಟ್ ಪರೀಕ್ಷೆ ಬರೆದು ವೈದ್ಯಕೀಯ ಸೀಟು ಗಿಟ್ಟಿಸಿಕೊಂಡ ನಿಜ ಘಟನೆಯನ್ನು ಸಿನಿಮಾ ಮಾಡಲಾಗುತ್ತಿದೆ.