Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಚಿತ್ರಕ್ಕೆ 'ಬಾಹುಬಲಿ' ಸಂಗೀತ ನಿರ್ದೇಶಕ ಸಾಥ್
Recommended Video
ಎಂಎಂ ಕೀರವಾಣಿ....ತೆಲುಗು ಚಿತ್ರರಂಗದ ಬಹುದೊಡ್ಡ ಹೆಸರು. ಯಶಸ್ವಿ ನಿರ್ದೇಶಕ ರಾಜಮೌಳಿ ಅವರ ಬಹುತೇಕ ಎಲ್ಲ ಚಿತ್ರಕ್ಕೂ ಇವರೇ ಸಂಗೀತ ನೀಡಿರುವುದು. ತೆಲುಗು, ಹಿಂದಿ, ತಮಿಳು ಹಾಗೂ ಕನ್ನಡ ಚಿತ್ರಗಳಿಗೂ ಸಂಗೀತ ನಿರ್ದೇಶನ ಮಾಡಿದ್ದಾರೆ.
ಇಂತಹ ದಿಗ್ಗಜ ಸಂಗೀತ ನಿರ್ದೇಶಕ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ದರ್ಶನ್ ಅವರ 50ನೇ ಚಿತ್ರ ಕುರುಕ್ಷೇತ್ರದ ಟೈಟಲ್ ಹಾಡನ್ನ ಕೀರವಾಣಿ ಹಾಡಿದ್ದಾರೆ.
ತೆಲುಗು ಜನರಿಗೆ ಕುರುಕ್ಷೇತ್ರದ ಬಗ್ಗೆ ದರ್ಶನ್ ಹೇಳಿದ್ದೇನು?
ಸಾಹೋರೇ ಸಾಹೋ....ಗೀತೆಗೆ ಬಾಹುಬಲಿ ಸಂಗೀತ ನಿರ್ದೇಶಕ ಧ್ವನಿಗೂಡಿಸಿದ್ದಾರೆ. ಅಂದ್ಹಾಗೆ, ಕೀರವಾಣಿ ಹಾಡಿರೋದು ಕನ್ನಡ ಹಾಡಲ್ಲ, ತೆಲುಗು ವರ್ಷನ್ ಹಾಡು. ಸಾಮಾನ್ಯವಾಗಿ ಡಬ್ ಮಾಡಿದ ಹಾಡುಗಳು ಕೇಳಲು ಅಷ್ಟಾಗಿ ಚೆನ್ನಾಗಿರಲಿಲ್ಲ. ಆದರೆ, ಕೀರವಾಣಿ ದನಿಯಲ್ಲಿ ಬಂದಿರುವ ಈ ಹಾಡು ಮೂಲ ತೆಲುಗು ಹಾಡೇ ಇರಬಹುದು ಎನ್ನುವಷ್ಟು ಚೆನ್ನಾಗಿ ಬಂದಿದೆ.
ಕುರುಕ್ಷೇತ್ರದಲ್ಲಿ ನಿಖಿಲ್ ಕುಮಾರ್ ಬಗ್ಗೆ ಈಗಲೂ ಕಾಡ್ತಿದೆ ಗೊಂದಲ.!
ಕನ್ನಡದಲ್ಲಿ ಡಾ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ತೆಲುಗಿನಲ್ಲಿ ವೆನ್ನಿಲಕಾಂತಿ ಸಾಹಿತ್ಯ ಬರೆದಿದ್ದಾರೆ. ಸದ್ಯ ತೆಲುಗಿನಲ್ಲಿ ಟ್ರೈಲರ್ ಬಂದಿತ್ತು. ಈಗ ಟೈಟಲ್ ಹಾಡು ಬಂದಿದೆ. ಈ ಹಾಡು ಕೇಳಿದ ತೆಲುಗು ಪ್ರೇಕ್ಷಕರು ನಮ್ಮದೇ ಸಿನಿಮಾ ಎಂದು ಬರಮಾಡಿಕೊಳ್ಳುತ್ತಿದ್ದಾರೆ.
ಅಳಿಮಯ್ಯ, ಭೈರವಿ, ಸ್ವಾತಿ, ಅಪ್ಪಾಜಿ, ಕರ್ನಾಟಕ ಸುಪುತ್ರ, ದೀಪಾವಳಿ, ಸುಂದರಕಾಂಡ, ಜಮೀನ್ದಾರು, ವೀರಮದಕರಿ ಅಂತಹ ಕನ್ನಡ ಚಿತ್ರಗಳಿಗೆ ಸಂಗೀತ ಒದಗಿಸಿದ್ದಾರೆ ಕೀರವಾಣಿ.