Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣದ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನು ಇಂದು ಸಿಸಿಬಿ ಯು ವಿಚಾರಣೆಗೆ ಹಾಜರಾಗುವಂತೆ ಕರೆದಿತ್ತು. ಅಂತೆಯೇ ಇಂದ್ರಜಿತ್ ಲಂಕೇಶ್ ಸಿಸಿಬಿ ಕಚೇರಿಗೆ ಹಾಜರಾಗಿದ್ದರು. ಆದರೆ ಕಾರಣಾಂತರಗಳಿಂದ ವಿಚಾರಣೆ ನಡೆದಿಲ್ಲ.
Recommended Video
'ಸಿಸಿಬಿ ಅಧಿಕಾರಿಗಳು ಇಂದು ವಿಚಾರಣೆಗೆ ಬರಲು ಹೇಳಿದ್ದರು, ಅಂತೆಯೇ ಬಂದೆ. ಆದರೆ ಅಧಿಕಾರಿ ಬಸಪ್ಪ ಅಂಗಡಿ ಅವರಿಗೆ ಕಲಾಪದ ಡ್ಯೂಟಿ ಹಾಕಿದ್ದ ಕಾರಣ ಅವರು ಅಲ್ಲಿಗೆ ಹೋಗಿದ್ದಾರೆ. ನನ್ನನ್ನು ಬೇರೆಯ ದಿನ ವಿಚಾರಣೆಗೆ ಕರೆಯುತ್ತೇನೆಂದು ಹೇಳಿದ್ದಾರೆ, ಇಂದು ವಿಚಾರಣೆ ನಡೆದಿಲ್ಲ' ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
ಮಾಧ್ಯಮಗಳೊಟ್ಟಿಗೆ ಡ್ರಗ್ಸ್ ಪ್ರಕರಣದ ಬಗ್ಗೆ ಮಾತನಾಡಿದ ಇಂದ್ರಜಿತ್ ಲಂಕೇಶ್, 'ನಾನು ಕೆಲವು ತಿಂಗಳಿನಿಂದಲೂ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಗೆ ಸಹಕಾರ ನೀಡುತ್ತಲೇ ಬಂದಿದ್ದೇನೆ. ನನ್ನ ಸಹಕಾರ ಹೀಗೆಯೇ ಮುಂದುವರೆಯಲಿದೆ' ಎಂದಿದ್ದಾರೆ.
'ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಣ್ಣ ಮೀನುಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಇನ್ನೂ ಬಾಕಿ ಇದೆ' ಎಂದು ಮಾರ್ಮಿಕವಾಗಿ ಹೇಳಿದ್ದಾರೆ ಇಂದ್ರಜಿತ್ ಲಂಕೇಶ್.
'ಸಿಸಿಬಿ ಪೊಲೀಸರು ಈಗಾಗಲೇ ಕೋಟ್ಯಂತರ ಮೌಲ್ಯದ ಡ್ರಗ್ಸ್, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಲವು ಡ್ರಗ್ ಪೆಡ್ಲರ್ಗಳನ್ನು ಸಹ ಬಂಧಿಸಿದ್ದಾರೆ. ನೈಜಿರಿಯನ್ ಪ್ರಜೆಗಳನ್ನು ಸಹ ಕೆಲವರನ್ನು ಬಂಧಿಸಿದ್ದಾರೆ. ಅಲ್ಲಿಗೆ ಈ ಜಾಲ ಎಷ್ಟು ದೊಡ್ಡದ್ದು ಎಂಬುದು ಅರ್ಥವಾಗುತ್ತದೆ' ಎಂದಿದ್ದಾರೆ ಇಂದ್ರಜಿತ್ ಲಂಕೇಶ್.