Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾದವರು ಸರ್ಕಾರಕ್ಕೆ ಧಮ್ಕಿ ಹಾಕಿದರು: ಸಿಟಿ ರವಿ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ತೀವ್ರ ಹೆಚ್ಚಳವಾಗಿ ಪರಿಸ್ಥಿತಿ ಕೈಮೀರಿ ಹೋಗಲು ಸಿನಿಮಾ ರಂಗದವರು ಪರೋಕ್ಷ ಕಾರಣ ಎಂದಿದ್ದಾರೆ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ.
ಇಂದು (ಏಪ್ರಿಲ್ 22) ಸಿಟಿ ರವಿ ಅವರು ಸುಮನಹಳ್ಳಿಗೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿ ಮೃತರ ಕುಟುಂಬದವರು ಇತರ ಗ್ರಾಮಸ್ಥರು ಸಿಟಿ ರವಿಗೆ ಮುತ್ತಿಗೆ ಹಾಕಿದರು. ಘಟನೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಕೊರೊನಾ ಹೆಚ್ಚಳವಾಗಲು ಸರ್ಕಾರ ಕಾರಣವಲ್ಲ ಎಂದು 'ಡಿಫೆಂಡ್' ಮಾಡುತ್ತಾ 'ಸರ್ಕಾರದ ಮೇಲೆ ಸಿನಿಮಾ ರಂಗದವರು ಹಾಗೂ ಇತರರು ಹೇರಿದ ಒತ್ತಡದಿಂದ ಇಂದು ಕೊರೊನಾ ಪರಿಸ್ಥಿತಿ ಉಲ್ಬಣವಾಗಿದೆ' ಎಂದರು.
''ಎಂಟು ಹತ್ತು ದಿನದ ಹಿಂದೆ ಥಿಯೇಟರ್ ಬಂದ್ ಮಾಡಬೇಕು, ಜಿಮ್ ಬಂದ್ ಮಾಡಬೇಕು ಎಂದು ಸರ್ಕಾರ ನಿರ್ಧರಿಸಿದಾಗ ಸಿನಿಮಾದವರು ಬಂದು ಧಮ್ಕಿ ಹಾಕಿದರು, ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯಿತು. ಜಿಮ್ಗಳನ್ನು ಬಂದ್ ಮಾಡೋಣ ಎಂದು ನಿರ್ಧರಿಸಿದಾಗ ಮತ್ತೆ ಜಿಮ್ ನವರು ಬಂದು ಧಮ್ಕಿ ಹಾಕಿದರು, ಸರ್ಕಾರ ಮತ್ತೆ ತನ್ನ ನಿರ್ಧಾರವನ್ನು ಹಿಂದೆ ಪಡೆಯಬೇಕಾಯಿತು'' ಎಂದರು ಸಿ.ಟಿ.ರವಿ.
ಅದರಿಂದಾಗಿಯೇ ಇಂದು ದೊಡ್ಡ ಬೆಲೆ ತೆರಬೇಕಾಗಿದೆ: ಸಿಟಿ ರವಿ
''ವಿಪಕ್ಷವೂ ಸೇರಿದಂತೆ ''ಯಾಕೆ ಚಿತ್ರಮಂದಿರ ಬಂದ್ ಮಾಡಬೇಕು'' ಎಂದು ಪ್ರಶ್ನೆ ಮಾಡಿದರು. ಮಾಧ್ಯಮಗಳು ಸಹ ಅದನ್ನೇ ತೋರಿಸಿದವು. ಯಾರೋ ಸೆಲೆಬ್ರಿಟಿ ಬಂದು ಸ್ಟೇಟ್ಮೆಂಟ್ ಕೊಟ್ಟ ಕೂಡಲೇ ಮಾಧ್ಯಮಗಳೆಲ್ಲಾ ಆ ಕಡೆ ಫೋಕಸ್ ಕೊಟ್ಟವು. ಅದಕ್ಕೆ ದೊಡ್ಡ ಬೆಲೆ ಇಂದು ತೆರಬೇಕಾಗಿದೆ' ಎಂದಿದ್ದಾರೆ ಸಿಟಿ ರವಿ.
ಮನವಿ ಮೇರೆಗೆ ಆದೇಶ ಸಡಿಲಿಸಿತ್ತು ಸರ್ಕಾರ
ಪುನೀತ್ ರಾಜ್ಕುಮಾರ್ ನಟನೆಯ 'ಯುವರತ್ನ' ಸಿನಿಮಾ ಬಿಡುಗಡೆ ಆಗಿ ಎರೆಡೇ ದಿನಕ್ಕೆ ಏಪ್ರಿಲ್ ಮೂರರಿಂದ ಚಿತ್ರಮಂದಿರಗಳಲ್ಲಿ 50% ಪ್ರೇಕ್ಷಕರಿಗಷ್ಟೆ ಅವಕಾಶ ಕೊಡಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವರು ತೀವ್ರವಾಗಿ ಖಂಡಿಸಿದ್ದರು. ಜಿಮ್ಗಳನ್ನು ಬಂದ್ ಮಾಡುವ ವಿಷಯವಾಗಿಯೂ ಹೀಗೆಯೇ ಆಗಿತ್ತು.
ಸಿಎಂಗೆ ಮನವಿ ಮಾಡಿದ್ದ ಪುನೀತ್ ರಾಜ್ಕುಮಾರ್
ಪುನೀತ್ ರಾಜ್ಕುಮಾರ್ ಹಾಗೂ 'ಯುವರತ್ನ' ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು,ನಿರ್ದೇಶಕ ಸಂತೋಶ್ ಆನಂದ್ ರಾಮ್ ಅವರು ಸಿಎಂ ಅವರನ್ನು ಭೇಟಿಯಾಗಿ ಮನವಿ ಮಾಡಿದ ಬಳಿಕ ಏಪ್ರಿಲ್ 7 ರಿಂದ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಲಾಗುತ್ತದೆ ಎಂದು ಆದೇಶವನ್ನು ಸಡಿಲಿಸಿದರು. ನಂತರ ಏಪ್ರಿಲ್ 7 ರಿಂದ ಸಿನಿಮಾ ಮಂದಿರಗಳಲ್ಲಿ 50% ಪ್ರೇಕ್ಷಕರಿಗಷ್ಟೆ ಅವಕಾಶ ನೀಡಲಾಗುತ್ತಿತ್ತು. ಈಗ ಹೊಸ ಆದೇಶದಂತೆ ಏಪ್ರಿಲ್ 21 ರಿಂದ ಮೇ 4 ರವರೆಗೆ ರಾಜ್ಯದಾದ್ಯಂತ ಚಿತ್ರಮಂದಿರಗಳು ಸಂಪೂರ್ಣ ಬಂದ್ ಆಗಿರಲಿವೆ.
Recommended Video
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹಠಾತ್ತನೆ ಏರಿಕೆಯಾಗಿವೆ. ಬೆಂಗಳೂರಿನಲ್ಲಿ ಬಹುತೇಕ ಆಸ್ಪತ್ರೆಗಳು ಭರ್ತಿಯಾಗಿವೆ. ಆಮ್ಲಜನಕದ ಸಿಲಿಂಡರ್ ಕೊರತೆ ಹಾಗೂ ರೆಮ್ಡಿಸಿವಿರ್ ಲಸಿಕೆಯ ತೀವ್ರ ಕೊರತೆ ಕಾಡುತ್ತಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 23,500 ಹೊಸ ಪ್ರಕರಣಗಳು ದಾಖಲಾಗಿದ್ದು, 116 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಏಪ್ರಿಲ್ 21 ರವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13726 ಆಗಿದೆ.