Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಭೇಟಿ ನಂತರ 'ಕರಿಯ'ನ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು.?
Recommended Video
ಕಾರು ಅಪಘಾತವಾಗಿ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರನ್ನ ಈಗಾಗಲೇ ಹಲವು ರಾಜಕೀಯ ಗಣ್ಯರು, ಚಿತ್ರರಂಗದವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ನಿನ್ನೆ ದಾಸನನ್ನ ಭೇಟಿ ಮಾಡಿದ್ದಾರೆ. ಬಳಿಕ ಮಾತನಾಡಿದ ಪ್ರತಾಪ್ ಸಿಂಹ ''ಕೆಂಚಾಲೋ ಮಚ್ಚಾಲೋ ಕಾಲದಿಂದಲೂ ನಾನು ಅವರ ಅಭಿಮಾನಿ'' ಎಂದು ಹೇಳುವ ಮೂಲಕ ಡಿ ಬಾಸ್ ಅಭಿಮಾನಿಗಳ ಖುಷಿಗೆ ಕಾರಣವಾದರು.
ದರ್ಶನ್ ಕಾರು ಅಪಘಾತ: 'ಡಿ-ಬಾಸ್'ಗೆ ಆಘಾತ ನೀಡಿದ ವೈದ್ಯರ ಸಲಹೆ
''ನಾವು ಬಹಳ ಹಿಂದಿನಿಂದಲೂ ದರ್ಶನ್ ಅವರನ್ನ ಇಷ್ಟಪಟ್ಕೊಂಡು ಹಾಗೂ ಅವರ ಸಿನಿಮಾಗಳನ್ನ ನೋಡ್ಕೊಂಡು ಬಂದಿದ್ದೇವೆ. ಸಹಜವಾಗಿ ದರ್ಶನ್ ಗೆ ಅಪಘಾತವಾಗಿದೆ ಎಂಬ ಸುದ್ದಿ ಕೇಳಿದಾಗ ನಮಗೂ ಆಘಾತವಾಗಿತ್ತು. ಈಗ ಅವರನ್ನ ನೋಡಿದೆ, ತುಂಬಾ ಚೆನ್ನಾಗಿದ್ದಾರೆ. ಬಲಗೈಗೆ ಪೆಟ್ಟಾಗಿರುವುದರಿಂದ ಕೆಲವು ದಿನ ವಿಶ್ರಾಂತಿ ಬೇಕಾಗಬಹುದು'' ಎಂದರು.
ವೈದ್ಯರು ನೀಡಿದ ಸಲಹೆಯಿಂದ ದರ್ಶನ್ ಚಿತ್ರಗಳಲ್ಲಿ ಭಾರಿ ಬದಲಾವಣೆ.!
'ಸತತವಾಗಿ ಸಿನಿಮಾಗಳನ್ನ ಮಾಡ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ಅಭಿನಯಿಸ್ತಿದ್ದಾರೆ. ಇದು ಅವರಿಗೆ ಇದೊಂದು ಬ್ರೇಕ್ ಅಂತ ಭಾವಿಸಿ, ಆದಷ್ಟೇ ಬೇಗ ಕಂಬ್ಯಾಕ್ ಮಾಡಲಿ ಎಂದು ಕೇಳಿಕೊಳ್ಳುತ್ತೇನೆ' ಎಂದು ಶುಭಹಾರೈಸಿದ್ದಾರೆ.
ಇನ್ನು ಕಾರು ಅಪಘಾತದಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಆಪ್ತ ರಾಯ್ ಆಂಟೋನಿ ಇದ್ದರು. ನಾಲ್ಕು ಜನರಿಗೂ ಗಾಯಗಳಾಗಿತ್ತು. ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದರ್ಶನ್ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.