Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಮುಕ್ತವಾದ ಸಂಸದೆ ಸುಮಲತಾ: ಈಗಲೇ ಹೊರಬರುವುದಿಲ್ಲವಂತೆ
ನಟಿ, ಸಂಸದೆ ಸುಮಲತಾ ಅಂಬರೀಶ್ ಕೊರೊನಾ ಗೆ ತುತ್ತಾಗಿ ಅದರಿಂದ ಬಿಡುಗಡೆ ಪಡೆದಿದ್ದಾರೆ. ಈ ಬಗ್ಗೆ ಇಂದು ಪತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Recommended Video
ಜುಲೈ 6 ನೇ ತಾರೀಖು ಸುಮಲತಾ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಆ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಮತ್ತು ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೋಲೇಶನ್ ಗೆ ಒಳಪಟ್ಟಿದ್ದರು.
ಆಘಾತಕಾರಿ ಸಂಗತಿ ಹಂಚಿಕೊಂಡ ನಟಿ, ಸಂಸದೆ ಸುಮಲತಾ ಅಂಬರೀಶ್
ಇದೀಗ ಮೂರು ವಾರಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸುಮಲತಾ, 'ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ ಕೊರೊನಾದಿಂದ ಗುಣಮುಖವಾಗಿದ್ದೇನೆ' ಎಂದು ಹೇಳಿದ್ದಾರೆ. ಜೊತೆಗೆ ಪತ್ರವೊಂದನ್ನು ಸಹ ಹಂಚಿಕೊಂಡಿದ್ದಾರೆ.
ಈಗಲೇ ಹೊರಗೆ ಬರುವುದಿಲ್ಲ ಸುಮಲತಾ
ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿದ್ದೇನೆ, ಕೊರೊನಾದಿಂದ ಗುಣಮುಖವಾಗಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ. ಆದರೆ ಅವರು ಈಗಲೇ ಮನೆಯಿಂದ ಹೊರಗೆ ಬರುವುದಿಲ್ಲವಂತೆ. ಬದಲಿಗೆ ವೈದ್ಯರ ಸಲಹೆಯಂತೆ ಇನ್ನೂ ನಾಲ್ಕು ವಾರದ ವಿಶ್ರಾಂತಿ ಪಡೆದು ಸೇವೆಗೆ ಮರಳುತ್ತಾರಂತೆ.
ವೈದ್ಯ ಸತೀಶ್ ಅವರ ಸಲಹೆ ಪಾಲಿಸಿದ್ದಾರೆ ಸುಮಲತಾ
ಕೊರೊನಾ ಸಮಯದಲ್ಲಿ ವೈದ್ಯ ಸತೀಶ್ ಅವರು ನೀಡಿದ ಸಲಹೆಗಳಿಗೆ ಧನ್ಯವಾದ ಹೇಳಿರುವ ಸುಮಲತಾ. ಜನರ ಜೊತೆಗೆ ಹಿಂದಿನ ಉಲ್ಲಾಸದಿಂದ ಬೆರೆಯಲು ಇನ್ನೂ ನಾಲ್ಕು ವಾರಗಳ ವಿಶ್ರಾಂತಿ ಅವಶ್ಯಕ ಎಂದು ವೈದ್ಯರು ಹೇಳಿದ್ದಾರಂತೆ.
ಸುಮಲತಾ ಗೆ ಕೊರೊನಾ ಪಾಸಿಟಿವ್: ಯಾರಿಗೆಲ್ಲಾ ಕೊರೊನಾ ಆತಂಕ
ಕೊರೊನಾಕ್ಕೆ ಭಯ ಪಡಪೇಡಿ ಎಂದ ಸುಮಲತಾ
ಕೊರೊನಾ ಪಾಸಿಟಿವ್ ಆದವರಿಗೆ ಧೈರ್ಯದ ಮಾತುಗಳನ್ನು ಹೇಳಿರುವ ಸುಮಲತಾ, 'ಕೊರೊನಾ ಬಂದವರು ಹೆಸರಬೇಕಿಲ್ಲ. ವೈದ್ಯರ ಸಲಹೆ ತಪ್ಪದೆ ಪಾಲಿಸಿ. ಭಯ ಪಡಬೇಡಿ, ನಿಮ್ಮ ಪಾಸಿಟಿವ್ ಯೋಚನೆಗಳಿಂದ ಕೊರೊನಾ ಪಾಸಿಟಿವ್ ಅನ್ನು ಸೋಲಿಸಿ' ಎಂದು ಹೇಳಿದ್ದಾರೆ.
ಅಭಿಮಾನಿಗಳಿಗೆ ಸುಮಲತಾ ಧನ್ಯವಾದ
ಕೊರೊನಾ ಪಾಸಿಟಿವ್ ಆದಾಗ ತಮ್ಮ ಪರವಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿರುವ ಸುಮಲತಾ, 'ಪಾಸಿಟಿವ್ ಆದಾಗ, ನೀವೆಲ್ಲರೂ ನನಗಾಗಿ ಪ್ರಾರ್ಥಿಸಿದ್ದೀರಿ, ಬೇಗ ಗುಣಮುಖ ಆಗಲಿ ಎಂದು ಹಾರೈಸಿದ್ದೀರಿ. ಇದೇ ಹಾರೈಕೆಗಳು, ಶುಭಕಾಮನೆಗಳಿಂದ ನಾನು ಪೂರ್ಣವಾಗಿ ಗುಣಮುಖ ಆಗಿದ್ದೇನೆ' ಎಂದಿದ್ದಾರೆ.
ಕೊರೊನಾ ಸೋಂಕಿತರನ್ನ ಅಪರಾಧಿಗಳಂತೆ ಕಾಣುವುದು, ನಿಂದನೆ ಮಾಡೋದು ಸರಿಯಲ್ಲ: ಸುಮಲತಾ ಅಂಬರೀಶ್