Don't Miss!
- News
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಅದಾನಿ, ಇದು ಆರ್ಥಿಕ ದಿವಾಳಿತನದ ಮುನ್ಸೂಚನೆಯೇ
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲು ಪಂಜಾಬಿ ನಟ ದೀಪ್ ಸಿಧು ಕಾರಣ ಎಂಬ ಆರೋಪ ಕೇಳಿ ಬಂದಿದೆ. ದೀಪ್ ಸಿಧು ಬಿಜೆಪಿ ಬೆಂಗಲಿಗ, ಮೋದಿ ಮತ್ತು ಅಮಿತ್ ಶಾ ಜೊತೆ ಒಡನಾಟ ಹೊಂದಿದ್ದಾನೆ, ಸಂಸದ ಸನ್ನಿ ಡಿಯೋಲ್ ಅವರ ಆಪ್ತ ಎಂದು ಬಿಂಬಿಸುವ ಫೋಟೋಗಳು ವೈರಲ್ ಆಗಿದೆ.
ಈ ಬಗ್ಗೆ ಸಂಸದ ಸನ್ನಿ ಡಿಯೋಲ್ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದು, ''ದೀಪ್ ಸಿಧು ಜೊತೆ ನನಗೆ ಅಥವಾ ನನ್ನ ಕುಟುಂಬಕ್ಕೆ ಯಾವುದೇ ಸಂಪರ್ಕ ಇಲ್ಲ'' ಎಂದಿದ್ದಾರೆ.
ರೈತರ
ಪ್ರತಿಭಟನೆ:
ಕೆಂಪುಕೋಟೆ
ಮೇಲೆ
ಬಾವುಟ
ಹಾರಿಸಿದ್ದು
ಸಿನಿಮಾ
ನಟ
ದೀಪ್
ಸಿಧು?
''ಕೆಂಪುಕೋಟೆಯಲ್ಲಿ ನಡೆದ ಘಟನೆ ಬಗ್ಗೆ ನನಗೆ ಬೇಸರವಿದೆ. ಆದರೆ, ದೀಪ್ ಸಿಧು ಜೊತೆಗೆ ನನಗೆ ಆಗಲಿ, ನನ್ನ ಕುಟುಂಬ ಸದಸ್ಯರಿಗೆ ಆಗಲಿ ಯಾವುದೇ ರೀತಿಯ ಒಡನಾಟ, ಸಂಪರ್ಕ ಇಲ್ಲ ಎಂದು ಡಿಸೆಂಬರ್ 6 ರಂದೇ ಹೇಳಿದ್ದೇನೆ'' ಎಂದು ಜನವರಿ 26 ರಂದು ಮಾಡಿದ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮತ್ತೊಂದೆಡೆ ''ಕೆಂಪುಕೋಟೆಯಲ್ಲಿ ಮಹಾನ್ ಸಾಹೇಬ್ ಬಾವುಟ ಹಾರಿಸಿದ್ದು ನಾವೇ, ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿಲ್ಲ. ರೈತರ ಪ್ರತಿಭಟನೆಗೆ ನಾವು ಜೊತೆಯಾಗಿದ್ವಿ, ನಾನು ಯಾವುದೇ ಪಕ್ಷದ ಬೆಂಬಲಿಗನಲ್ಲ, ಯಾವ ರಾಜಕಾರಣಿಯ ಆಪ್ತನೂ ಅಲ್ಲ'' ಎಂದು ದೀಪ್ ಸಿಧು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಯಾರು ಈ ದೀಪ್ ಸಿಧು?
1984ರಲ್ಲಿ ಪಂಜಾಬ್ ರಾಜ್ಯದ ಮಕ್ತ್ ಸರ್ ಜಿಲ್ಲೆಯಲಿ ಜನಿಸಿದ ದೀಪ್ ಸಿಧು ಕಾನೂನು ಪದವಿಧರರಾಗಿದ್ದಾರೆ. ಜೊತೆಗೆ ಪಂಜಾಬಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು ಎನ್ನಲಾಗಿದೆ.
ರೈತರ ಪ್ರತಿಭಟನೆ ವೇಳೆ ಹಿಂಸಾಚಾರ: ಪೊಲೀಸರು ನೀಡಿದ ಹೇಳಿಕೆಯಲ್ಲೇನಿದೆ?
Recommended Video
ದೀಪ್ ಸಿಧು ಪಂಜಾಬ್ನ ನಿಷೇಧಿತ ಸಂಘಟನೆ 'ಸಿಖ್ ಫಾರ್ ಜಸ್ಟಿಸ್' ಸದಸ್ಯರಾಗಿದ್ದರು ಎಂದು ತಿಳಿದು ಬಂದಿದೆ. ದೀಪ್ ಸಿಧು ಅವರ ವಿರುದ್ಧ ರೈತ ಸಂಘಟನೆಗಳು ಸಹ ಆಕ್ರೋಶ ಹೊರಹಾಕಿದೆ.