ಚಾಮುಂಡೇಶ್ವರಿಗೆ ನಮಿಸಿ ಬಿಡುಗಡೆಗೆ ಸಿದ್ಧವಾದ ಮಿ. ಐರಾವತ

By Suneetha

ಬಾಕ್ಸಾಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕಾಯುತ್ತಿರುವ ಘಳಿಗೆ ಹತ್ತಿರವಾಗುತ್ತಿದೆ.

ಯಾಕಂತೀರಾ?, ಯಾಕೆಂದರೆ 'ಅದ್ದೂರಿ' ನಿರ್ದೇಶಕ ಎ.ಪಿ ಅರ್ಜುನ್ ಆಕ್ಷನ್-ಕಟ್ ಹೇಳಿರುವ ಈ ವರ್ಷದ ಬಹು ನಿರೀಕ್ಷಿತ ಚಿತ್ರ 'ಮಿಸ್ಟರ್ ಐರಾವತ' ಅಕ್ಟೋಬರ್ 1 ರಂದು ತೆರೆ ಮೇಲೆ ಅಪ್ಪಳಿಸಲು ಸಜ್ಜಾಗಿದ್ದು, ಅಭಿಮಾನಿಗಳು ಕೌಂಟ್ ಡೌನ್ ಶುರು ಹಚ್ಚಿಕೊಂಡಿದ್ದಾರೆ.

ಇನ್ನು ದರ್ಶನ್ ಅವರು ಖಾಕಿ ಬಟ್ಟೆಯಲ್ಲಿ ಕಾಣಿಸಿಕೊಂಡರೆ ಒಂಥರಾ ಖದರೇ ಬೇರೆ ಇರುತ್ತೆ ಅಂತ ಅಭಿಮಾನಿಗಳ ಅಭಿಪ್ರಾಯ. 'ಅಯ್ಯ', 'ಸ್ವಾಮಿ', ಹಾಗೂ 'ಅರ್ಜುನ್' ಚಿತ್ರದ ನಂತರ ಇದೀಗ ಮತ್ತೊಮ್ಮೆ ಪ್ರೇಕ್ಷಕರ ಎದುರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಜಬರ್ದಸ್ತ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.[ದರ್ಶನ್ ಅಭಿನಯದ 'ಐರಾವತ' ಆಡಿಯೋ ವಿಮರ್ಶೆ]

ನಿರ್ದೇಶಕ ಎ.ಪಿ ಅರ್ಜುನ್ ಅವರು ಆಕ್ಷನ್-ಕಟ್ ಹೇಳಿರುವ 'ಮಿಸ್ಟರ್ ಐರಾವತ' ಚಿತ್ರದಲ್ಲಿ ಪರಭಾಷಾ ನಟಿ ಊರ್ವಶಿ ರೌಟೇಲ ಅವರು ದರ್ಶನ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ. ಈಗಾಗಲೇ ಅಭಿಮಾನಿಗಳ ಮನಗೆದ್ದಿರುವ ಟೀಸರ್, ಟ್ರೈಲರ್ ಗಳು ಸಾಮಾಜಿಕ ಜಾಲಾತಾಣಗಳಲ್ಲಿ ಸಖತ್ ರೆಸ್ಪಾನ್ಸ್ ಗಳಿಸುತ್ತಿದೆ.[ದರ್ಶನ್ ಕುತ್ತಿಗೆಗೆ ಕೈಹಾಕಿ ಆಚೆ ದಬ್ಬಿದವರು ಯಾರು?]

ಇದೀಗ ಚಿತ್ರಕ್ಕೆ ಪೈನಲ್ ಟಚ್ ನೀಡಿರುವ ಎ.ಪಿ ಅರ್ಜುನ್ ಅವರು ಅಕ್ಟೋಬರ್ 1 ರಂದು ಚಿತ್ರವನ್ನು ತೆರೆ ಮೇಲೆ ತರುವುದಾಗಿ ತಿಳಿಸಿದ್ದಾರೆ. ಮುಂದೆ ಓದಿ..

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಿತ್ರತಂಡ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಿತ್ರತಂಡ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದರ್ಶನ್ ಅಭಿನಯದ 'ಮಿಸ್ಟರ್ ಐರಾವತ' ನಿಗೆ ಫೈನಲ್ ಟಚ್ ನೀಡಿ ಚಿತ್ರದ ಶೂಟಿಂಗ್ ಪೂರ್ತಿಗೊಳಿಸಿದ ಚಿತ್ರತಂಡ

'ಐರಾವತ'ನ ನಿರ್ದೇಶಕ ಎ.ಪಿ ಅರ್ಜುನ್

'ಐರಾವತ'ನ ನಿರ್ದೇಶಕ ಎ.ಪಿ ಅರ್ಜುನ್

ಚಿತ್ರದ ಚಿತ್ರೀಕರಣ ಯಾವುದೇ ಅಡ್ಡಿ, ಆತಂಕಗಳಿಲ್ಲದೇ ಸರಾಗವಾಗಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಕ್ಯಾಮರಕ್ಕೆ ಆರತಿ ಬೆಳಗುವ ಮೂಲಕ ಪೂಜೆ ಸಲ್ಲಿಸಿದ ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್

ಐರಾವತ ತಂಡದಿಂದ ವಿಕ್ಟರಿ

ಐರಾವತ ತಂಡದಿಂದ ವಿಕ್ಟರಿ

ಚಿತ್ರದ ಕೊನೆಯ ಒಂದು ಸೀನ್ ನ ಶಾಟ್ ತೆಗೆಯಲು ಮೈಸೂರಿನ ಚಾಮುಂಡಿ ತಾಯಿಯ ಸನ್ನಿಧಾನಕ್ಕೆ ಬಂದ ಚಿತ್ರತಂಡ ವಿಕ್ಟರಿ ತೋರಿಸಿ ಸಂಭ್ರಮಿಸಿದ ಪರಿ.

'ಮಿಸ್ಟರ್ ಐರಾವತ' ಅಕ್ಟೋಬರ್ 1 ಕ್ಕೆ ತೆರೆಗೆ

'ಮಿಸ್ಟರ್ ಐರಾವತ' ಅಕ್ಟೋಬರ್ 1 ಕ್ಕೆ ತೆರೆಗೆ

ಬಹುನಿರೀಕ್ಷೆಯ ಚಿತ್ರ 'ಐರಾವತ' ಅಕ್ಟೋಬರ್ 1 ರಂದು ಇಡೀ ಕರ್ನಾಟಕದಾದ್ಯಂತ ಎಲ್ಲೆಡೆ ತೆರೆಗೆ ಭರ್ಜರಿಯಾಗಿ ಅಪ್ಪಳಿಸುತ್ತಿದೆ. ಇದೇ ಖುಷಿಯಲ್ಲಿ ಚಿತ್ರತಂಡದ ಸಡಗರ

ನಿರ್ದೇಶಕ ಅರ್ಜುನನಿಂದ ದೇವಿಗೆ ಪ್ರಾರ್ಥನೆ

ನಿರ್ದೇಶಕ ಅರ್ಜುನನಿಂದ ದೇವಿಗೆ ಪ್ರಾರ್ಥನೆ

ತಾಯಿ ಚಾಮುಂಡಿ ದೇವಿಯ ಸನ್ನಿಧಾನದಲ್ಲಿ ನಿರ್ದೇಶಕರು ಹಾಗು ಇಡೀ ಚಿತ್ರದ ಬಳಗ ಚಾಮುಂಡಿ ತಾಯಿಗೆ ಪ್ರಾರ್ಥನೆ ಸಲ್ಲಿಸಿದರು

'ಐರಾವತ'ನಿಗೆ ಫೈನಲ್ ಟಚ್

'ಐರಾವತ'ನಿಗೆ ಫೈನಲ್ ಟಚ್

ಚಿತ್ರಕ್ಕೆ ಫೈನಲ್ ಟಚ್ ನೀಡಿ ಯಶಸ್ವಿಯಾಗಿ ಚಿತ್ರದ ಶೂಟಿಂಗ್ ಮುಗಿಸಿದ ಖುಷಿಯಲ್ಲಿ ಮೈಸೂರಿನಲ್ಲಿ ಸಂಭ್ರಮಪಟ್ಟ 'ಐರಾವತ' ತಂಡ

More from Filmibeat

English summary
Much awaited Kannada Movie Mr. Airavatha, directed by AP Arjun of Addhuri fame, will be released on 1st October, Thursday all over Karnataka. Final shot was shot at Chamundi hills, Mysuru. The movie team took the blessings of mother Chamundeshwari. Challenging star Darshan, bollywood beauty Urvashi Rautela are in the lead.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X