Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲಂಫೇರ್ ಪ್ರಶಸ್ತಿ ಗೆದ್ದು ಬಿಟ್ಟ ನಮ್ಮ 'ರಾಮಾಚಾರಿ'
ಪ್ರತಿಷ್ಠಿತ 62ನೇ ಫಿಲಂಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ ಚೆನ್ನೈನಲ್ಲಿ ನಡೆಯುತ್ತಿದೆ. ಫಿಲಂಫೇರ್ ಪ್ರಶಸ್ತಿ ರೇಸ್ ನಲ್ಲಿದ್ದ ಕನ್ನಡದ ಎಲ್ಲಾ ಚಿತ್ರಗಳನ್ನ ಹಿಂದಕ್ಕೆ ತಳ್ಳಿ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ', ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಬ್ರೇಕಿಂಗ್ ನ್ಯೂಸ್ ಅಂದ್ರೆ, ಇದೇ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಚಿತ್ರದ ನಟನೆಗೆ ರಾಕಿಂಗ್ ಸ್ಟಾರ್ ಯಶ್ 'ಉತ್ತಮ ನಟ' ಪ್ರಶಸ್ತಿ ಪಡೆದಿದ್ದಾರೆ.
2014 ಡಿಸೆಂಬರ್ ನಲ್ಲಿ ತೆರೆಕಂಡ ಚಿತ್ರ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ'. ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿಯಾಗಿ ನಟಿಸಿದ ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳಿದ್ದರು.
ಗಲ್ಲಪೆಟ್ಟಿಗೆಯನ್ನ ಕೊಳ್ಳೆಹೊಡೆದ 'ರಾಮಾಚಾರಿ' ಇತ್ತೀಚೆಗಷ್ಟೇ 25 ವಾರಗಳನ್ನ ಪೂರೈಸಿ, ಅನೇಕ ಚಿತ್ರಮಂದಿರಗಳಲ್ಲಿ ಮುನ್ನುಗುತ್ತಿದೆ. ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿರುವ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಫಿಲಂಫೇರ್ ಪ್ರಶಸ್ತಿಯನ್ನೂ ಗಿಟ್ಟಿಸುವಲ್ಲಿ ಯಶಸ್ವಿ ಆಗಿದೆ.
ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ 'ದೃಶ್ಯ', ಕೃಷ್ಣ ನಿರ್ದೇಶನದ 'ಗಜಕೇಸರಿ', ಶ್ರೀಮುರುಳಿ ನಟನೆಯ 'ಉಗ್ರಂ' ಮತ್ತು ರಕ್ಷಿತ್ ಶೆಟ್ಟಿ ನಟಿಸಿರುವ 'ಉಳಿದವರು ಕಂಡಂತೆ' ಚಿತ್ರ ಅತ್ತ್ಯುತ್ತಮ ಚಿತ್ರ ರೇಸ್ ನಲ್ಲಿತ್ತು. [ಫಿಲಂಫೇರ್ ಪ್ರಶಸ್ತಿ ರೇಸಿನಲ್ಲಿ 'ಉಳಿದವರು ಕಂಡಂತೆ' ಲೀಡಿಂಗ್]
ಇನ್ನೂ 'ಪವರ್ ***' ಚಿತ್ರಕ್ಕೆ ಪುನೀತ್ ರಾಜ್ ಕುಮಾರ್, 'ಉಳಿದವರು ಕಂಡಂತೆ' ಚಿತ್ರಕ್ಕೆ ರಕ್ಷಿತ್ ಶೆಟ್ಟಿ, 'ಅಧ್ಯಕ್ಷ' ಚಿತ್ರಕ್ಕೆ ಶರಣ್, 'ಉಗ್ರಂ' ಸಿನಿಮಾಗೆ ನಾಮಿನೇಟ್ ಆಗಿದ್ದ ಶ್ರೀಮುರುಳಿ ಅವರನ್ನ ಬೀಟ್ ಮಾಡಿ ಶ್ರೇಷ್ಠ ನಟ ಪ್ರಶಸ್ತಿಯನ್ನ ಯಶ್ ಗಿಟ್ಟಿಸಿಕೊಂಡಿದ್ದಾರೆ.
ಪ್ರಶಸ್ತಿ ಪಡೆಯುವುದಕ್ಕೆ ಈಗ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ತಂಡ ಚೆನ್ನೈಗೆ ಹಾರಿದೆ.