Don't Miss!
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ ಅಭಿನಯದ ಕಲ್ಪನ ಈ ವಾರ ವಸ್ತುಂದಿ!
ಇಲ್ಲಿ ಉಪೇಂದ್ರ ದ್ವಿಪಾತ್ರದಲ್ಲಿ ನಟಿಸಿಲ್ಲ. ಎರಡು ಶೇಡ್ ವುಳ್ಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೂ ಮಂಗಳಮುಖಿಯಾಗಿ! ಹೌದು.
ತೆಲುಗು ಹಾಗೂ ತಮಿಳಿನಲ್ಲಿ ತೆರೆ ಕಂಡಿದ್ದ ಕಾಂಚನ ಚಿತ್ರದ ರೀಮೇಕೇ ಕಲ್ಪನ'. ಅಲ್ಲಿ ಲಾರೆನ್ಸ್ ಮಾಡಿದ ಪಾತ್ರವನ್ನು ಇಲ್ಲಿ ಉಪ್ಪಿ ನಿರ್ವಹಿಸಿದ್ದಾರೆ. ಶರತ್ ಪಾತ್ರವನ್ನು ಸಾಯಿಕುಮಾರ್ ಮಾಡಿದ್ದಾರೆ.
ದ್ವಿತೀಯಾರ್ಧದ ನಂತರ ಮಂಗಳಮುಖಿ ಪಾತ್ರ ಉಪ್ಪಿಯನ್ನು ಆವರಿಸಿಕೊಳ್ಳುತ್ತದೆ. ಮುಂದೆ...? ಥಿಯೇಟರ್ನಲ್ಲಿ ನೋಡಿದ್ರೇನೆ ಮಜಾ ಎನ್ನುತ್ತಾರೆ ಉಪ್ಪಿ. ಇನ್ನು ಉಪ್ಪಿ ಜೊತೆ ಕನ್ನಡದ ಹುಡುಗಿ ಲಕ್ಷ್ಮಿ ರೈ ಹೆಜ್ಜೆ ಹಾಕಿದ್ದಾರೆ.
ಉಮಾಶ್ರೀ ಮತ್ತು ಶೃತಿ ಕೂಡ ಚತ್ರದಲ್ಲಿದ್ದಾರೆ. ಕಳೆದ ವಾರ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಉಪ್ಪಿ ಕೂಡ ಚಿತ್ರದ ಮೇಲೆ ಇನ್ನಿಲ್ಲದ ಭರವಸೆ ಇರಿಸಿಕೊಂಡಿದ್ದಾರೆ.
ಖ್ಯಾತ ನಿರ್ದೇಶಕ ರಾಮನಾರಾಯಣ್ ಅವರ 125ನೇ ಚಿತ್ರದಲ್ಲಿ ಕಾಣಿಸಿಕೊಂಡಿರೋದು ನನ್ನ ಭಾಗ್ಯ. ಹಾರರ್ ಚಿತ್ರದಲ್ಲಿ ಕಾಮಿಡಿ ಇಡೋದು ಕಷ್ಟ. ಆದರೆ ಕಲ್ಪನ'ದಲ್ಲಿ ಎರಡೂ ಮಿಳಿತವಾಗಿದೆ ಎನ್ನುತ್ತಾರೆ ಉಪ್ಪಿ.
ನನಗೆ ಮಿನುಗುತಾರೆ ಕಲ್ಪನ ಜೊತೆ ನಟಿಸಬೇಕೆಂಬ ಆಸೆಯಿತ್ತು. ಆದರೆ ಅದು ಈಡೇರಲಿಲ್ಲ. ಈಗ ಗಂಡು ಕಲ್ಪನ ಜೊತೆ ನಟಿಸಿದ್ದೇನೆ ಎಂದು ಹೇಳಿ ನಗುತ್ತಾರೆ ಶೃತಿ. ಎಲ್ಲರ ಕುತೂಹಲಕ್ಕೆ ಈ ವಾರ ತೆರೆ ಬೀಳಲಿದೆ.