Just In
Don't Miss!
- Automobiles
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
- News
ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಂದಿನ ತಿಂಗಳ ಬಿಡುಗಡೆಯಾಗ್ತಿದೆ 'ಮುಗಿಲು' ಚಿತ್ರ
ಯುವ ನಿರ್ದೇಶಕ ಅರು ಕುಮಾರ್ ಚಿತ್ರರಂಗದಲ್ಲಿ ತಮ್ಮ ಮೊದಲ ಹೆಜ್ಜೆ ಇಟ್ಟಿದ್ದಾರೆ. 'ಮುಗಿಲು' ಸಿನಿಮಾದ ಮೂಲಕ ಡೈರೆಕ್ಟರ್ ಆಗಿರುವ ಅವರು ತಮ್ಮ ಸಿನಿಮಾವನ್ನು ಮುಂದಿನ ತಿಂಗಳ ಪ್ರೇಕ್ಷಕರ ಮುಂದೆ ತರಲಿದ್ದಾರೆ.
ಅಂಬಿ ಹುಟ್ಟುಹಬ್ಬ ದಿನ ಮನದ ಮಾತು ಹಂಚಿಕೊಂಡ ನಿಖಿಲ್
ಈಗಾಗಲೇ ಈ ಸಿನಿಮಾ ಹಾಡುಗಳು ಮತ್ತು ಟ್ರೈಲರ್ ಗಮನ ಸೆಳೆದಿದೆ. 'ಗೂಡು ಇಲ್ಲದ ಪಕ್ಷಿ...' ಹಾಡಿಗೆ ಯೂ ಟ್ಯೂಬ್ ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರದ ಹಾಡುಗಳನ್ನು ಅನಾಥಾಶ್ರಮ ಮತ್ತು ವೃದ್ದಾಶ್ರಮದಲ್ಲಿ ರಿಲೀಸ್ ಮಾಡಲಾಗಿದೆ.
ಹಾಡುಗಳಿಗೆ ಸ್ಟನಿಂಗ್ ಬ್ರದರ್ಸ್ (ಸಾಯಿ ಮತ್ತು ಚಕ್ರಿ) ಸಂಗೀತ ಸಂಯೋಜನೆ ಮಾಡಿದ್ದಾರೆ. ಅರು ಕುಮಾರ್ ಸಾಯಿ, ಚಕ್ರಿ, ಸೋಹನ್ ಸಾಹಿತ್ಯ ಇದೆ. ಸಾಯಿ, ಚಕ್ರಿ, ವಿಹಾನ್ ಅಭ್ಯುದಯ, ಸಂಗೀತಾ ಶರತ್ ಧ್ವನಿ ನೀಡಿದ್ದಾರೆ. ಇನ್ನು ಚಿತ್ರದ ಹಾಡುಗಳು ಮತ್ತು ಟ್ರೈಲರ್ ಲಹರಿ ಆಡಿಯೋ ಸಂಸ್ಥೆಯಲ್ಲಿ ಬಿಡುಗಡೆ ಮಾಡಲಾಗಿದೆ.
ಚಿತ್ರದಲ್ಲಿ ನೀನಾಸಂ ನ ಕಲಾವಿದ ಆರ್ಯ, ಕಾವ್ಯ, ವಿಲಾಸ್ ರಾವ್, ರುಚಿತ್ ರಂಗನಾಥ್, ಸಂತೋಷ್ ಸಾರ್ಥಕ್, ಮಿಮಿಕ್ರಿ ರಾಜ್ ಗೋಪಾಲ್, ಒ.ಎಸ್ ಬಿರಾದಾರ್, ರೇಖಾ ಭದ್ರಾವತಿ, ರಾಘವೇಂದ್ರ ನಾಯ್ಕ್ ಸೇರಿದಂತೆ ಮುಂತಾದವರು ನಟಿಸಿದ್ದಾರೆ.
'ಮುಗಿಲು' ಒಬ್ಬ ವ್ಯಕ್ತಿಯ ಜೀವನಾಧಾರಿತ ಕಥೆ ಇದ್ದು "ಕಣ್ ಹನಿಗಳ ಕಂಬನಿ" ಎಂಬ ಟ್ಯಾಗ್ ಲೈನ್ ನೀಡಲಾಗಿದೆ. ಚೆನ್ನಕೇಶವ ಮೂರ್ತಿ ಎಂ. ಟಿ ಚಿತ್ರದ ನಿರ್ಮಾಣ ಮಾಡಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ಹಿನ್ನೆಲೆ ಧ್ವನಿ ನೀಡಿದ್ದಾರೆ. ಚಿತ್ರವನ್ನು ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿವೆ.