Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅತ್ಯಾಚಾರ ಸಂತ್ರಸ್ತೆಯರ ಪರ ದನಿ: ನೈಜ ಘಟನೆ ಆಧರಿತ ಸಿನಿಮಾ 'ವಿ3' ಬಿಡುಗಡೆ
ವರಲಕ್ಷ್ಮಿ ಶರತ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ 'ವಿ3' ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಕನ್ನಡದ ನಟಿ ಪಾವನಾ ಗೌಡ ಈ ಸಿನಿಮಾದ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. 'ಅದುಕುಲಂ' ನರೆನ್, ಈಸ್ಟರ್ ಅನಿಲ್ ಸಿನಿಮಾದಲ್ಲಿ ಇತರ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ನೈಜ ಕಥೆಯನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಅಪ್ಪ, ಮಗಳು ಹೀಗೆ ಸುಖ ಸಂಸಾರದಲ್ಲಿ ಇದ್ದಕ್ಕಿದ್ದಂತೆ ಇವರ ಮೇಲೆ ಒಂದು ದಿನ ಕರಿ ಕಾರ್ಮೋಡ ಸರಿದಂತೆ ಒಂದು ಘಟನೆ ನಡೆಯುತ್ತದೆ. ಜೀವನದಲ್ಲಿ ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು ಗುರಿ ಸಾಧಿಸುವ ಕಡೆ ಹೆಜ್ಜೆ ಇಡುತ್ತಿದ್ದ ಮಗಳ ಜೀವನದಲ್ಲಿ ಒಂದು ಕೆಟ್ಟ ಘಟನೆ ನಡೆಯುತ್ತದೆ. ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಅವಳ ಬದುಕು, ಗೊತ್ತು ಗುರಿ ಇಲ್ಲದಂತೆ ಆಗುತ್ತದೆ.
ಐಎಎಸ್ ವರಲಕ್ಷ್ಮಿ ನಡೆಸುವ ತನಿಖೆಯಿಂದ ಈ ಕುಟುಂಬಕ್ಕೆ ನ್ಯಾಯ ಸಿಗಬಹುದಾ ಅನ್ನೋದೇ ಈ ಸಿನಿಮಾದ ರೋಚಕತೆ. ಸಂತ್ರಸ್ತೆ ವಿಂಧ್ಯಾ ಕುರಿತ ತೀರ್ಪಿನಿಂದ ಸ್ಪೂರ್ತಿ ಪಡೆದು ಈ ಸಿನಿಮಾ ರೂಪುಗೊಂಡಿದೆ. ಅಮುದವನ್ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಶಿವ ಪ್ರಭು ಕ್ಯಾಮರಾ ಹಿಡಿದಿದ್ದಾರೆ.
ಕನ್ನಡ, ತಮಿಳು, ತೆಲುಗು ಮೂರು ಭಾಷೆಯಲ್ಲಿ ದೇಶದ 450 ಸಿನಿಮಾ ಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. 'ತೂತುಮಡಿಕೆ', 'ಆಟಗಾರ', 'ಸದ್ದು ವಿಚಾರಣೆ ನಡೆಯುತ್ತಿದೆ' ಮುಂತಾದ ಕನ್ನಡ ಚಿತ್ರಗಳಲ್ಲಿ ಪಾವನಾ ನಟಿಸಿದ್ದಾರೆ. ಮೊದಲ ಬಾರಿ ತಮಿಳು ಮೂಲದ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕನ್ನಡದ 'ಮಾಣಿಕ್ಯ' ಚಿತ್ರದಲ್ಲಿ ಸುದೀಪ್ ಅವರಿಗೆ ನಾಯಕಿ ನಟಿಯಾಗಿ ಅಭಿನಯಿಸಿರುವ ವರಲಕ್ಷ್ಮಿ ಸಹ ಈ ಸಿನಿಮಾದ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವರಲಕ್ಷ್ಮಿ ಅವರಿಗೆ ಈ ರೀತಿಯ ಪಾತ್ರಗಳು ಹೊಸದೇನೂ ಅಲ್ಲ. ರಾಜಕಾರಣಿಯಾಗಿ ಪೊಲೀಸ್ ಅಧಿಕಾರಿಯಾಗಿ ಅವರು ತೆರೆಯ ಮೇಲೆ ಚೆನ್ನಾಗಿ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿ ಈ ಸಿನಿಮಾದ ಮೂಲಕ ಮತ್ತೊಮ್ಮೆ ಮಿಂಚಲಿದ್ದಾರೆ.
ತನಿಖೆಯ ಪ್ರತಿ ಹಂತದಲ್ಲೂ ರೋಚಕತೆ ಹೊಂದಿರುವುದು ಈ ಸಿನಿಮಾದ ಜೀವಾಳ. ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವ ಸಂದೇಶ ಈ ಸಿನಿಮಾದಲ್ಲಿ ಇದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಈ ಸಿನಿಮಾ ದನಿ ಎತ್ತಲಿದೆ.