Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತ್ಯಾಚಾರ ಸಂತ್ರಸ್ತೆಯರ ಪರ ದನಿ: ನೈಜ ಘಟನೆ ಆಧರಿತ ಸಿನಿಮಾ 'ವಿ3' ಬಿಡುಗಡೆ
ವರಲಕ್ಷ್ಮಿ ಶರತ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ 'ವಿ3' ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಕನ್ನಡದ ನಟಿ ಪಾವನಾ ಗೌಡ ಈ ಸಿನಿಮಾದ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. 'ಅದುಕುಲಂ' ನರೆನ್, ಈಸ್ಟರ್ ಅನಿಲ್ ಸಿನಿಮಾದಲ್ಲಿ ಇತರ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ನೈಜ ಕಥೆಯನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಅಪ್ಪ, ಮಗಳು ಹೀಗೆ ಸುಖ ಸಂಸಾರದಲ್ಲಿ ಇದ್ದಕ್ಕಿದ್ದಂತೆ ಇವರ ಮೇಲೆ ಒಂದು ದಿನ ಕರಿ ಕಾರ್ಮೋಡ ಸರಿದಂತೆ ಒಂದು ಘಟನೆ ನಡೆಯುತ್ತದೆ. ಜೀವನದಲ್ಲಿ ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು ಗುರಿ ಸಾಧಿಸುವ ಕಡೆ ಹೆಜ್ಜೆ ಇಡುತ್ತಿದ್ದ ಮಗಳ ಜೀವನದಲ್ಲಿ ಒಂದು ಕೆಟ್ಟ ಘಟನೆ ನಡೆಯುತ್ತದೆ. ಸಾಮೂಹಿಕ ಅತ್ಯಾಚಾರಕ್ಕೆ ಗುರಿಯಾದ ಅವಳ ಬದುಕು, ಗೊತ್ತು ಗುರಿ ಇಲ್ಲದಂತೆ ಆಗುತ್ತದೆ.
ಐಎಎಸ್ ವರಲಕ್ಷ್ಮಿ ನಡೆಸುವ ತನಿಖೆಯಿಂದ ಈ ಕುಟುಂಬಕ್ಕೆ ನ್ಯಾಯ ಸಿಗಬಹುದಾ ಅನ್ನೋದೇ ಈ ಸಿನಿಮಾದ ರೋಚಕತೆ. ಸಂತ್ರಸ್ತೆ ವಿಂಧ್ಯಾ ಕುರಿತ ತೀರ್ಪಿನಿಂದ ಸ್ಪೂರ್ತಿ ಪಡೆದು ಈ ಸಿನಿಮಾ ರೂಪುಗೊಂಡಿದೆ. ಅಮುದವನ್ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಶಿವ ಪ್ರಭು ಕ್ಯಾಮರಾ ಹಿಡಿದಿದ್ದಾರೆ.
ಕನ್ನಡ, ತಮಿಳು, ತೆಲುಗು ಮೂರು ಭಾಷೆಯಲ್ಲಿ ದೇಶದ 450 ಸಿನಿಮಾ ಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. 'ತೂತುಮಡಿಕೆ', 'ಆಟಗಾರ', 'ಸದ್ದು ವಿಚಾರಣೆ ನಡೆಯುತ್ತಿದೆ' ಮುಂತಾದ ಕನ್ನಡ ಚಿತ್ರಗಳಲ್ಲಿ ಪಾವನಾ ನಟಿಸಿದ್ದಾರೆ. ಮೊದಲ ಬಾರಿ ತಮಿಳು ಮೂಲದ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕನ್ನಡದ 'ಮಾಣಿಕ್ಯ' ಚಿತ್ರದಲ್ಲಿ ಸುದೀಪ್ ಅವರಿಗೆ ನಾಯಕಿ ನಟಿಯಾಗಿ ಅಭಿನಯಿಸಿರುವ ವರಲಕ್ಷ್ಮಿ ಸಹ ಈ ಸಿನಿಮಾದ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವರಲಕ್ಷ್ಮಿ ಅವರಿಗೆ ಈ ರೀತಿಯ ಪಾತ್ರಗಳು ಹೊಸದೇನೂ ಅಲ್ಲ. ರಾಜಕಾರಣಿಯಾಗಿ ಪೊಲೀಸ್ ಅಧಿಕಾರಿಯಾಗಿ ಅವರು ತೆರೆಯ ಮೇಲೆ ಚೆನ್ನಾಗಿ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿ ಈ ಸಿನಿಮಾದ ಮೂಲಕ ಮತ್ತೊಮ್ಮೆ ಮಿಂಚಲಿದ್ದಾರೆ.
ತನಿಖೆಯ ಪ್ರತಿ ಹಂತದಲ್ಲೂ ರೋಚಕತೆ ಹೊಂದಿರುವುದು ಈ ಸಿನಿಮಾದ ಜೀವಾಳ. ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವ ಸಂದೇಶ ಈ ಸಿನಿಮಾದಲ್ಲಿ ಇದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಈ ಸಿನಿಮಾ ದನಿ ಎತ್ತಲಿದೆ.