Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಮದಕರಿ' ಸೇನೆಗೆ ಸಿಕ್ಕಿತು ನಾದಬ್ರಹ್ಮನ ಬಲ
Recommended Video
ನಟ ದರ್ಶನ್ ಅವರ 'ಗಂಡುಗಲಿ ಮದಕರಿ ನಾಯಕ' ಚಿತ್ರತಂಡಕ್ಕೆ ಈಗ ನಾದಬ್ರಹ್ಮ ಹಂಸಲೇಖ ಅವರ ಆಗಮನವಾಗಿದೆ. ಹಂಸಲೇಖ ಅವರಿಂದ ಸಿನಿಮಾಗೆ ದೊಡ್ಡ ಶಕ್ತಿ ಬಂದಂತೆ ಆಗಿದೆ.
'ಗಂಡುಗಲಿ ಮದಕರಿ ನಾಯಕ' ಚಿತ್ರದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ದೊಡ್ಡಣ್ಣ ಅವರು ಚಿತ್ರತಂಡಕ್ಕೆ ಹಂಸಲೇಖ ಅವರನ್ನು ಬರ ಮಾಡಿಕೊಂಡಿದ್ದಾರೆ.
ದರ್ಶನ್ 'ಮದಕರಿ ನಾಯಕ' ಚಿತ್ರಕ್ಕೆ ನಾಯಕಿ ಇವರಾಗ್ಬೇಕಂತೆ
ಈ ಬಗ್ಗೆ ಫೇಸ್ ಬುಕ್ ನಲ್ಲಿ ತಮ್ಮ ಸಂತಸ ಹಂಚಿಕೊಂಡಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಭಾರತ ಚಿತ್ರರಂಗ ಕಂಡ ಪ್ರತಿಭಾವಂತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನಮ್ಮ ತಂಡಕ್ಕೆ ಸ್ವಾಗತ ಎಂದಿದ್ದಾರೆ.
'ಗಂಡುಗಲಿ ಮದಕರಿ ನಾಯಕ' ಒಂದು ಐತಿಹಾಸಿಕ ಸಿನಿಮಾವಾಗಿದ್ದು, ಹಂಸಲೇಖ ಚಿತ್ರಕ್ಕೆ ಒಳ್ಳೆಯ ಆಯ್ಕೆ. ಅವರ ಅನುಭವ ಸಿನಿಮಾಗೆ ಬಲ ನೀಡುತ್ತದೆ. ಅಲ್ಲದೆ, ಇತ್ತೀಚಿಗೆ ಹಂಸಲೇಖ ಯಾವುದೇ ಸಿನಿಮಾಗೆ ಸಂಗೀತ ನೀಡಿಲ್ಲ. ಇದು ಅವರ ಕಮ್ ಬ್ಯಾಕ್ ಸಿನಿಮಾ ಆಗಬಹುದು.
'ಮದಕರಿ' ವಿವಾದದ ಬಗ್ಗೆ ಮುನಿಸಿಕೊಂಡೆ ಮಾತನಾಡಿದ ಮುನಿರತ್ನ!
ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮರೆಯದ ಹಾಡು ನೀಡಿರುವ ಹಂಸಲೇಖ ಅವರು ಮತ್ತೆ ಒಂದು ದೊಡ್ಡ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.