Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ಸಂಗೀತ ನಿರ್ದೇಶಕ ಎಂ.ಎಸ್.ವಿಶ್ವನಾಥನ್ ವಿಧಿವಶ
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಎಂ.ಎಸ್.ವಿಶ್ವನಾಥನ್ ಅವರು ವಿಧಿವಶರಾಗಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಮಂಗಳವಾರ (ಜುಲೈ 14)ರಂದು ಮೃತಪಟ್ಟಿದ್ದು, ಬುಧವಾರ ಅಂತ್ಯಸಂಸ್ಕಾರ ನಡೆಯಲಿದೆ.
ಉಸಿರಾಟದ
ತೊಂದರೆಯಿಂದ
ಬಳಲುತ್ತಿದ್ದ
ಎಂ.ಎಸ್.ವಿಶ್ವನಾಥನ್
(87)
ಅವರನ್ನು
ಎರಡು
ವಾರಗಳ
ಹಿಂದೆ
ಚೆನ್ನೈನ
ಖಾಸಗಿ
ಆಸ್ಪತ್ರೆಗೆ
ದಾಖಲು
ಮಾಡಲಾಗಿತ್ತು.
ಮಂಗಳವಾರ
ಮುಂಜಾನೆ
4.15ರ
ಸುಮಾರಿಗೆ
ಚಿಕಿತ್ಸೆ
ಫಲಕಾರಿಯಾಗದೆ
ಅವರು
ಮೃತಪಟ್ಟಿದ್ದಾರೆ.
ವಿಶ್ವನಾಥನ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬ ವರ್ಗದವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. [ವಿಶ್ವನಾಥನ್ ಬಗ್ಗೆ ಓದಿ]
ಎಂಎಸ್ವಿ ಎಂದೇ ಖ್ಯಾತರಾಗಿದ್ದ ವಿಶ್ವನಾಥನ್ ಅವರು ಕನ್ನಡ, ತಮಿಳು, ತೆಲಗು, ಮಲೆಯಾಳಂ ಸೇರಿದಂತೆ ಸುಮಾರು 1,200 ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿನ ಅನೇಕ ಕಾರ್ಯಕ್ರಮಗಳಲ್ಲಿಯೂ ಅವರು ತೊಡಗಿಸಿಕೊಂಡಿದ್ದರು.
ಕನ್ನಡದಲ್ಲಿ ಬೆಂಕಿಯಲ್ಲಿ ಅರಳಿದ ಹೂವು, ಎರಡು ರೇಖೆಗಳು, ತೆನಾಲಿ ರಾಮಕೃಷ್ಣ ಸೇರಿದಂತೆ ಹಲವು ಚಿತ್ರಗಳಿಗೆ ಎಂ.ಎಸ್.ವಿಶ್ವನಾಥನ್ ಸಂಗೀತ ಸಂಯೋಜಿಸಿದ್ದರು.
ಬೆಂಕಿಯಲ್ಲಿ ಅರಳಿದ ಹೂವು ಚಿತ್ರದ ಒಂದು ಹಾಡು