Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಪಾತ್ರ ವೈಭವೀಕರಿಸಲಾಗಿದೆ; ಮುತ್ತುಲಕ್ಷ್ಮಿ
ಈ ಸಂಬಂಧ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿರುವುದು ಗೊತ್ತೇ ಇದೆ. 'ಅಟ್ಟಹಾಸ' ಚಿತ್ರಕ್ಕೆ ಪತ್ರಕರ್ತ ನಕ್ಕೀರನ್ ಗೋಪಾಲ್ ಆರಂಭದಲ್ಲಿ ಕ್ಯಾತೆ ತೆಗೆದರೂ ಕೊನೆಗೆ ತಮ್ಮ ಅಭ್ಯಂತರವೇನು ಇಲ್ಲ ಎಂದರು. ಡಾ.ರಾಜ್ ಕುಟುಂಬಿಕರು ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಸೆನ್ಸಾರ್ ಮಂಡಳಿಯೂ ಒಪ್ಪಿಗೆ ನೀಡಿದ್ದು ತೆರಿಗೆ ರಹಿತ ಪ್ರಮಾಣಪತ್ರವನ್ನೂ ನೀಡಿದೆ.
ಆದರೆ ಚಿತ್ರವನ್ನು ವೀಕ್ಷಿಸಿದ ವೀರಪ್ಪನ್ ಪತ್ನಿ ಮಾತ್ರ "ಚಿತ್ರದಲ್ಲಿ ಡಾ.ರಾಜ್ ಅವರನ್ನು ವೈಭವೀಕರಿಸಲಾಗಿದೆ. ಅವರನ್ನು ಹೀರೋ ಎಂಬಂತೆ ತೋರಿಸಲಾಗಿದೆ. ಆದರೆ ಚಿತ್ರದ ಬಹುತೇಕ ಕಥೆ ರಾಜ್ ಅಪಹರಣಕ್ಕೊಳಗಾದ ಸಮಯದ್ದು" ಎಂದು ಮುತ್ತುಲಕ್ಷ್ಮಿ ಆರೋಪಿಸಿದ್ದಾರೆ ಎನ್ನುತ್ತವೆ ಮೂಲಗಳು.
ಸದ್ಯಕ್ಕೆ ಮದ್ರಾಸ್ ಹೈಕೋರ್ಟ್ ತೀರ್ಪಿಗಾಗಿ 'ಅಟ್ಟಹಾಸ' ಚಿತ್ರ ಕಾಯುತ್ತಿದೆ. ಚಿತ್ರಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟರೆ ನವೆಂಬರ್ ಮಧ್ಯಭಾಗದಲ್ಲಿ ಅಟ್ಟಹಾಸ ತೆರೆಕಾಣಲಿದೆ. ಬಹುಶಃ ನವೆಂಬರ್ 16ಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಕನ್ನಡ ಚಿತ್ರಪ್ರೇಮಿಗಳ ಕರಾಳ ನೆನಪುಗಳಲ್ಲಿ ಅಚ್ಚಳಿಯದೇ ಉಳಿದ ಪುಟಗಳು ವರನಟ ಡಾ.ರಾಜ್ ಅಪಹರಣ. ಈ ಸತ್ಯ ಘಟನೆಗಳ ಆಧಾರವಾಗಿ ಹೆಣೆದಿರುವ ಚಿತ್ರವೇ 'ಅಟ್ಟಹಾಸ'. ಈ ಚಿತ್ರದ ವಿಶೇಷ ಪಾತ್ರದಲ್ಲಿ ಅರ್ಜುಜ್ ಸರ್ಜಾ ಅಭಿನಯಿಸಿದ್ದಾರೆ. ವೀರಪ್ಪನ್ ಆಗಿ ಕಿಶೋರ್ ಮೀಸೆ ತಿರುವಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರ ಪಾತ್ರವನ್ನು ಸುರೇಶ್ ಒಬೆರಾಯ್ ಪೋಷಿಸಿದ್ದು ಚಿತ್ರ ಅತೀವ ಕುತೂಹಲ ಕೆರಳಿಸಿದೆ.
ಮೂರು ದಶಕಗಳ ಕಾಲ ವೀರಪ್ಪನ್ ನಡೆಸಿದ ಅಡವಿ ಜೀವನ, ವರನಟ ದಿವಂಗತ ಡಾ.ರಾಜ್ ಕುಮಾರ್ ಕಿಡ್ನಾಪ್ನ ಯಥಾವತ್ ಘಟನೆಗಳ ಆಧಾರವಾಗಿ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆ. ತೀವ್ರ ಸಂಚನಕ್ಕೆ ಕಾರಣವಾಗಿದ್ದ ರಾಜ್ ಕಿಡ್ನಾಪ್ ಕುರಿತ ಚಿತ್ರವನ್ನು ಬೆಳ್ಳಿತೆರೆಗೆ ತರುತ್ತಿರುವುದು ಇದೇ ಮೊದಲು. (ಏಜೆನ್ಸೀಸ್)