Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಂಡನ್ನಲ್ಲಿರುವ ಮಗಳನ್ನು ಕರೆತರುವ ವ್ಯವಸ್ಥೆ ಮಾಡಿ: ಜಯಮಾಲಾ ಮನವಿ
ಕೊರೊನಾ ಭೀತಿಯಿಂದ ವಿದೇಶದಲ್ಲಿ ಸಿಲುಕಿರುವ ಭಾರತೀಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲಿಯೂ ಇಟಲಿ, ಚೀನಾ, ಅಮೆರಿಕೆ, ದುಬೈಗಳಲ್ಲಿನ ಭಾರತೀಯರು ಜೀವ ಕೈಯಲ್ಲಿ ಹಿಡಿದುಕೊಂಡು ಸ್ವದೇಶಕ್ಕೆ ಯಾವಾಗ ಹೋದೇವೋ ಎಂದು ಕಾಯುತ್ತಿದ್ದಾರೆ.
ಹಲವು ಸೆಲೆಬ್ರಿಟಿಗಳು, ಅವರ ಮಕ್ಕಳೂ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದಾರೆ. ನಿನ್ನೆಯಷ್ಟೆ ಸಚಿವ ಆನಂದ್ ಸಿಂಗ್ ಅವರು ತಮ್ಮ ಪುತ್ರಿ ಇಟಲಿಯಲ್ಲಿ ಸಿಲುಕಿದ್ದಾಳೆಂದು ಹೇಳಿ ಸದನದಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಇಂದು ನಟಿ, ಮಾಜಿ ಸಚಿವೆ ಜಯಮಾಲಾ ಅವರು ತಮ್ಮ ಪುತ್ರಿಯ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ.
'ನನ್ನ ಮಗಳು ಲಂಡನ್ನಲ್ಲಿ ಸಿಲುಕಿಕೊಂಡಿದ್ದಾಳೆ, ಅವಳನ್ನು ಭಾರತಕ್ಕೆ ಕರೆ ತರಲು ಸಹಾಯ ಮಾಡಿರಿ' ಎಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ ಮಾಜಿ ಸಚಿವೆ ಜಯಮಾಲಾ.
ಪರಿಷತ್ನಲ್ಲಿ ಇಂದು ಮಾತನಾಡಿದ ಜಯಮಾಲಾ, 'ನನ್ನ ಮಗಳು ಲಂಡನ್ನಲ್ಲಿ ಇದ್ದಾಳೆ. ಅಲ್ಲಿಂದ ಭಾರತಕ್ಕೆ ಬರಲು ವಿಮಾನಗಳಿಲ್ಲ. ಆಕೆಯ ಜೊತೆ ಇನ್ನೂ ಹಲವರು ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಅವರನ್ನು ಭಾರತಕ್ಕೆ ಕರೆ ತರುವ ವ್ಯವಸ್ಥೆ ಆಗಬೇಕಿದೆ' ಎಂದು ಜಯಮಾಲಾ ಹೇಳಿದ್ದಾರೆ.
ಕೊರೊನಾ ಭೀತಿ ದಿನೇ-ದಿನೇ ಹೆಚ್ಚಾಗುತ್ತಲೇ ಇದೆ. ರಾಜ್ಯದಲ್ಲಿ ಈವರೆಗೆ 14 ಮಂದಿಗೆ ಸೋಂಕಿರುವುದು ಪತ್ತೆಯಾಗಿದೆ. ವಿದೇಶದಲ್ಲಿ ಸಿಲುಕಿರುವ ಹಲವು ಭಾರತೀಯರು ಸ್ವದೇಶಕ್ಕೆ ಮರಳಲಾಗದೆ ಒದ್ದಾಡುತ್ತಿದ್ದಾರೆ.