Don't Miss!
- News Neha Hiremath: ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮೈಸೂರು ಡೈರೀಸ್' ಮೊದಲ ಹಾಡು ಕೇಳಲು ಚೆಂದ
'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಗಮನ ಸೆಳೆದಿದ್ದ ಧನಂಜಯ್ ರಂಜನ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ 'ಮೈಸೂರು ಡೈರೀಸ್' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಟ್ರೈಲರ್ ಮೂಲಕ ಭರವಸೆ ಮೂಡಿಸಿರುವ ಈ ಚಿತ್ರ ಈಗ ಮೊದಲ ಹಾಡು ಬಿಡುಗಡೆ ಮಾಡಿದೆ.
'ದೂರದಿಂದ...ಸುರಸುಂದರಾಂಗ ಜಾಣ ಬಂದ.....' ಹಾಡು ರಿಲೀಸ್ ಆಗಿದ್ದು ಯೂಟ್ಯೂಬ್ ನಲ್ಲಿ ಸದ್ದು ಮಾಡ್ತಿದೆ. ಚರಣ್ ರಾಜ್ ಸಂಗೀತ ನೀಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ. ಸುಚಿತ್ರಾ ಸುರೇಸನ್ ಮತ್ತು ಧನ್ಯಶ್ ಜಗದೀಶ್ ಹಾಡಿದ್ದಾರೆ.
ಕನ್ನಡ ರಾಜೋತ್ಸವಕ್ಕೆ 'ಮೈಸೂರು ಡೈರೀಸ್' ನೋಡಬಹುದು
'ಮೈಸೂರು ಡೈರೀಸ್' ಸಿನಿಮಾ ನೆನಪುಗಳ ಪುಟವನ್ನ ಮತ್ತೆ ಬಿಚ್ಚಿಡುವಂತಹ ಸಿನಿಮಾ. ಪ್ರತಿಯೊಬ್ಬರ ಜೀವನದಲ್ಲೂ ಒಂದೊಂದು ಡೈರಿ ಇದ್ದೆ ಇರುತ್ತೆ. ಆ ಡೈರಿ ನೆನಪಾಗುವಂತಹ ಕಥೆ ಇದಾಗಿದೆಯಂತೆ. ಪ್ರಭು ಈ ಚಿತ್ರದ ನಾಯಕನಾಗಿದ್ದು, ಪಾವನಾ ಗೌಡ ನಾಯಕಿಯಾಗಿ ನಟಿಸಿದ್ದಾರೆ.
ಅಂದ್ಹಾಗೆ, ಈ ಚಿತ್ರವನ್ನ ನಿರ್ಮಾಣ ಮಾಡಿರುವುದು ದೀಪಕ್ ಕೃಷ್ಣ. ಈ ಹಿಂದೆ ಗೆಳೆಯರ ಜೊತೆ ಸೇರಿ 'ಪುಷ್ಪಕ ವಿಮಾನ' ಚಿತ್ರಕ್ಕೆ ಬಂಡವಾಳ ಹಾಕಿದ್ದರು. ದೀಪಕ್ ಕೃಷ್ಣ ಅವರಿಗೂ ಕೂಡ ಇದು ಸ್ವತಂತ್ರವಾಗಿ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ.
ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಶೀರ್ಷಿಕೆ, ಟೀಸರ್ ಈಗ ಹಾಡುಗಳ ಮೂಲಕ ಗಮನ ಸೆಳೆಯುತ್ತಿರುವ 'ಮೈಸೂರು ಡೈರೀಸ್' ಜನವರಿ ಅಂತ್ಯಕ್ಕೆ ತೆರೆಗೆ ಬರುವ ತಯಾರಿಯಲ್ಲಿದೆ.