Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮೈಸೂರು ಡೈರೀಸ್' ಮೊದಲ ಹಾಡು ಕೇಳಲು ಚೆಂದ
'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಗಮನ ಸೆಳೆದಿದ್ದ ಧನಂಜಯ್ ರಂಜನ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ 'ಮೈಸೂರು ಡೈರೀಸ್' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಟ್ರೈಲರ್ ಮೂಲಕ ಭರವಸೆ ಮೂಡಿಸಿರುವ ಈ ಚಿತ್ರ ಈಗ ಮೊದಲ ಹಾಡು ಬಿಡುಗಡೆ ಮಾಡಿದೆ.
'ದೂರದಿಂದ...ಸುರಸುಂದರಾಂಗ ಜಾಣ ಬಂದ.....' ಹಾಡು ರಿಲೀಸ್ ಆಗಿದ್ದು ಯೂಟ್ಯೂಬ್ ನಲ್ಲಿ ಸದ್ದು ಮಾಡ್ತಿದೆ. ಚರಣ್ ರಾಜ್ ಸಂಗೀತ ನೀಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ. ಸುಚಿತ್ರಾ ಸುರೇಸನ್ ಮತ್ತು ಧನ್ಯಶ್ ಜಗದೀಶ್ ಹಾಡಿದ್ದಾರೆ.
ಕನ್ನಡ ರಾಜೋತ್ಸವಕ್ಕೆ 'ಮೈಸೂರು ಡೈರೀಸ್' ನೋಡಬಹುದು
'ಮೈಸೂರು ಡೈರೀಸ್' ಸಿನಿಮಾ ನೆನಪುಗಳ ಪುಟವನ್ನ ಮತ್ತೆ ಬಿಚ್ಚಿಡುವಂತಹ ಸಿನಿಮಾ. ಪ್ರತಿಯೊಬ್ಬರ ಜೀವನದಲ್ಲೂ ಒಂದೊಂದು ಡೈರಿ ಇದ್ದೆ ಇರುತ್ತೆ. ಆ ಡೈರಿ ನೆನಪಾಗುವಂತಹ ಕಥೆ ಇದಾಗಿದೆಯಂತೆ. ಪ್ರಭು ಈ ಚಿತ್ರದ ನಾಯಕನಾಗಿದ್ದು, ಪಾವನಾ ಗೌಡ ನಾಯಕಿಯಾಗಿ ನಟಿಸಿದ್ದಾರೆ.
ಅಂದ್ಹಾಗೆ, ಈ ಚಿತ್ರವನ್ನ ನಿರ್ಮಾಣ ಮಾಡಿರುವುದು ದೀಪಕ್ ಕೃಷ್ಣ. ಈ ಹಿಂದೆ ಗೆಳೆಯರ ಜೊತೆ ಸೇರಿ 'ಪುಷ್ಪಕ ವಿಮಾನ' ಚಿತ್ರಕ್ಕೆ ಬಂಡವಾಳ ಹಾಕಿದ್ದರು. ದೀಪಕ್ ಕೃಷ್ಣ ಅವರಿಗೂ ಕೂಡ ಇದು ಸ್ವತಂತ್ರವಾಗಿ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ.
ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಶೀರ್ಷಿಕೆ, ಟೀಸರ್ ಈಗ ಹಾಡುಗಳ ಮೂಲಕ ಗಮನ ಸೆಳೆಯುತ್ತಿರುವ 'ಮೈಸೂರು ಡೈರೀಸ್' ಜನವರಿ ಅಂತ್ಯಕ್ಕೆ ತೆರೆಗೆ ಬರುವ ತಯಾರಿಯಲ್ಲಿದೆ.