Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ರಾಜೋತ್ಸವಕ್ಕೆ 'ಮೈಸೂರು ಡೈರೀಸ್' ನೋಡಬಹುದು
'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಗಮನ ಸೆಳೆದಿದ್ದ ಧನಂಜಯ್ ರಂಜನ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ 'ಮೈಸೂರು ಡೈರೀಸ್' ನವೆಂಬರ್ 1ಕ್ಕೆ ತೆರೆಗೆ ಬರುವ ತಯಾರಿಯಲ್ಲಿದೆ. ಸದ್ಯ, ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ವಿಶೇಷವಾಗಿ ಗಮನ ಸೆಳೆಯುತ್ತಿದೆ.
ಧನಂಜಯ್ ರಂಜನ್ 'ಕಿರಿಕ್ ಪಾರ್ಟಿ' ಚಿತ್ರದಲ್ಲಿ ನಟಿಸುವುದವರ ಜೊತೆಗೆ ಸಂಭಾಷಣೆ ಮತ್ತು 'ಬೆಳಗೆದ್ದು ಯಾರ ಮುಖವಾ ನಾನು ನೋಡಲಿ....'ಹಾಡು ರಚಿಸಿದ್ದರು. 'ರಾಮಾ ರಾಮಾ ರೇ' ಚಿತ್ರತಂಡದ ಜೊತೆ ಚಿತ್ರಕಥೆಯಲ್ಲಿ ಕೆಲಸ ಮಾಡಿದ್ದರು. 'ಗೋಧಿಬಣ್ಣ ಸಾಧಾರಣ ಮೈಕಟ್ಟು' ಚಿತ್ರದಲ್ಲೂ ಹಾಡು ರಚಿಸಿದ್ದರು. ಇದೀಗ ಮೊದಲ ಸಲ ಸ್ವತಂತ್ರ ನಿರ್ದೇಶಕರಾಗಿ 'ಮೈಸೂರು ಡೈರೀಸ್' ಗೆ ಆಕ್ಷನ್ ಕಟ್ ಹೇಳಿದ್ದಾರೆ.
ಕನ್ನಡದಲ್ಲಿ ಹೊಸ ಇತಿಹಾಸ ನಿರ್ಮಿಸಿದ 'ಕಿರಿಕ್ ಪಾರ್ಟಿ' ಹಾಡು
'ಮೈಸೂರು ಡೈರೀಸ್' ಸಿನಿಮಾ ನೆನಪುಗಳ ಪುಟವನ್ನ ಮತ್ತೆ ಬಿಚ್ಚಿಡುವಂತಹ ಸಿನಿಮಾ. ಪ್ರತಿಯೊಬ್ಬರ ಜೀವನದಲ್ಲೂ ಒಂದೊಂದು ಡೈರಿ ಇದ್ದೆ ಇರುತ್ತೆ. ಆ ಡೈರಿ ನೆನಪಾಗುವಂತಹ ಕಥೆ ಇದಾಗಿದೆಯಂತೆ. ಪ್ರಭು ಈ ಚಿತ್ರದ ನಾಯಕನಾಗಿದ್ದು, ಪಾವನಾ ಗೌಡ ನಾಯಕಿಯಾಗಿ ನಟಿಸಿದ್ದಾರೆ.
'ವಿಕ್ಟರಿ'ಗೆ ಬಂತು ಆನೆಬಲ: ದರ್ಶನ್ ಭೇಟಿ ಹಿಂದೆ ಹೀಗೊಂದು ಕುತೂಹಲ.!
ಅಂದ್ಹಾಗೆ, ಈ ಚಿತ್ರವನ್ನ ನಿರ್ಮಾಣ ಮಾಡಿರುವುದು ದೀಪಕ್ ಕೃಷ್ಣ. ಈ ಹಿಂದೆ ಗೆಳೆಯರ ಜೊತೆ ಸೇರಿ 'ಪುಷ್ಪಕ ವಿಮಾನ' ಚಿತ್ರಕ್ಕೆ ಬಂಡವಾಳ ಹಾಕಿದ್ದರು. ದೀಪಕ್ ಕೃಷ್ಣ ಅವರಿಗೂ ಕೂಡ ಇದು ಸ್ವತಂತ್ರವಾಗಿ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ.
ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ಶೀರ್ಷಿಕೆ ಮತ್ತು ಟೀಸರ್ ಮೂಲಕ ವಿಭಿನ್ನವಾಗಿ ಗಮನ ಸೆಳೆಯುತ್ತಿರುವ 'ಮೈಸೂರು ಡೈರೀಸ್' ಕನ್ನಡ ರಾಜೋತ್ಸವದ ಪ್ರಯುಕ್ತ ನವೆಂಬರ್ 1ಕ್ಕೆ ಚಿತ್ರಮಂದಿರಕ್ಕೆ ಬರ್ತಿರುವುದು ಚಿತ್ರಪ್ರೇಮಿಗಳಿಗೆ ಖುಷಿ ನೀಡಿದೆ.