ಬರುತ್ತಿದೆ ಮತ್ತೊಂದು ಚಿತ್ರ 'ಮೈಸೂರು ಮಲ್ಲಿಗೆ'

ಆದರೆ ಇದು ಒಂಟಿ ಹೆಣ್ಣಿನ ಮೇಲೆ ಪ್ರತಿನಿತ್ಯ ನಡೆಯುತ್ತಿರುವ ವಿಲಕ್ಷಣ ಶೋಷಣೆಯ ಕಥೆ ಹೊಂದಿದೆ. ಚಿತ್ರವು ಮೈಸೂರು, ಶ್ರೀರಂಗಪಟ್ಟಣ, ನಂಜನಗೂಡು, ಕೆ.ಆರ್.ಪೇಟೆ ಸುತ್ತಮುತ್ತ 25 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ.
ಈ ಹಿಂದೆ 'ಆಸ್ಕರ್' ಎಂಬ ವಿನೂತನ ಶೈಲಿಯ ಚಿತ್ರ ನಿರ್ದೇಶಿಸಿದ್ದ ಆಸ್ಕರ್ ಕೃಷ್ಣ 'ಮೈಸೂರು ಮಲ್ಲಿಗೆ' ಚಿತ್ರಕ್ಕೆ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸುವುದರೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನು ಕೂಡ ಹೊತ್ತಿದ್ದಾರೆ.
'ಸೀತಾ' ಧಾರಾವಾಹಿಯಲ್ಲಿ ನಟಿಸಿದ್ದ ರಂಜನ್ ಶೆಟ್ಟಿ ಹಾಗೂ 'ಅಮೃತ ವರ್ಷಿಣಿ' ಧಾರವಾಹಿ ನಟ ಶ್ರೀ ನಾಯಕರಾಗಿ ನಟಿಸುತ್ತಿದ್ದು, 'ಗಾಳಿ' ಚಿತ್ರದ ನಟಿ ರೂಪಾ ನಟರಾಜ್ ನಾಯಕಿ ಪಾತ್ರ ನಿರ್ವಹಿಸುತ್ತಿದ್ದಾರೆ. ಚಿತ್ರಕಥೆ ಸೂರ್ಯಕಾಂತ್, ಛಾಯಾಗ್ರಹಣ ಎಸ್.ನಾಗು ಸಂಗೀತವಿದ್ದು, ರಘುನಂದನ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. (ಒನ್ಇಂಡಿಯಾ ಕನ್ನಡ)
More from Filmibeat
English summary
After a decade one more Kannada film titled as 'Mysore Mallige', directed by Oscar Krishna. The single schedule shooting should held at Mysore, KR Pet, Nanjangud locations.


Click it and Unblock the Notifications











