Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಂತನಾಗ್ ಅವರ 'ಮೈಸೂರು ಮಸಾಲಾ' ಚಿತ್ರದ ಪೋಸ್ಟರ್ ಬಿಡುಗಡೆ
Recommended Video
ಅನಂತ್ ನಾಗ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ 'ಮೈಸೂರು ಮಸಲಾ' ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಕಿರುಚಿತ್ರ ಉತ್ಸವದಲ್ಲಿ (ಬಿಐಎಸ್ಎಫ್ಎಫ್) ಅಜಯ್ ಸರ್ಪೇಷ್ಕರ್ ಫಿಲಮ್ಸ್ ನ "ಮೈಸೂರು ಮಸಾಲಾ" ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವಡ್ ನ ಖ್ಯಾತ ನಟ ಅನಂತನಾಗ್, ಶರ್ಮಿಳಾ ಮಾಂಡ್ರೆ, ಸಂಯುಕ್ತ ಹೊರನಾಡು ಹಾಗೂ ಕಿರಣ್ ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
'ಮೈಸೂರು ಮಸಾಲಾ' ಸೈ-ಫೈ ಸಾಹಸಮಯ ಚಿತ್ರವಾಗಿರುವುದರಿಂದ ಸಾಕಷ್ಟು ವಿಎಫ್ಎಕ್ಸ್ ಹಾಗೂ ಎಸ್ಎಫ್ಎಕ್ಸ್ ಅಂಶಗಳನ್ನು ಅಳವಡಿಸಲಾಗಿದೆ. ಇತ್ತೀಚೆಗಷ್ಟೇ ಚಿತ್ರೀಕರಣ ಪೂರ್ಣಗೊಳಿಸಿದ್ದು, ನಿರ್ಮಾಣದ ನಂತರ ಕೆಲಸಗಳು ಆರಂಭ ಮಾಡಿದೆ.
ಇನ್ನು ಈ ಚಿತ್ರವನ್ನ ಅಜಯ್ ಸರ್ಪೇಷ್ಕರ್ ನಿರ್ದೇಶನ ಮತ್ತು ನಿರ್ಮಾಣ ಮಾಡಿದ್ದು, 'ಮೈಸೂರು ಮಸಾಲಾ' ಸ್ಯಾಂಡಲ್ ವುಡ್ನಲ್ಲಿ ಹೊಸ ಯುಗವನ್ನು ಆರಂಭಿಸಲಿದೆ " ಎಂದು ಭರವಸೆ ವ್ಯಕ್ತಪಡಿಸಿದರು ನಿರ್ದೇಶಕರು.
ಹಿರಿಯ ನಟ ಅನಂತನಾಗ್ ಅವರು, ಈ ಚಿತ್ರದಲ್ಲಿ ವಿಜ್ಞಾನದ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಸಾಕಷ್ಟು ಅನುಭವವಿರುವ ನಿವೃತ್ತ ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಹಾಗೂ ಹಲವು ಸೈ-ಫೈ ಚಿತ್ರಗಳಲ್ಲಿ ನಟಿಸಿ ಸೈ ಎನ್ನಿಸಿಕೊಂಡಿರುವ ಪ್ರಕಾಶ್ ಬೆಳವಾಡಿ ಅವರು ಕೂಡ ನಟಿಸಲಿದ್ದಾರೆ.
ಚಿತ್ರದ ಇತರ ಪಾತ್ರವರ್ಗವನ್ನು ಗೌಪ್ಯವಾಗಿಡಲಾಗಿದ್ದು, ಶರ್ಮಿಳಾ ಮಾಂಡ್ರೆ, ಸಂಯುಕ್ತ ಹೊರನಾಡು ಹಾಗೂ ಕಿರಣ್ ಶ್ರೀನಿವಾಸ್ ನಟಿಸಿದ್ದಾರೆ. ಇನ್ನುಳಿದಂತೆ ಮೈಸೂರು ಮಸಾಲ ಚಿತ್ರ ಅನ್ಐಡೆಂಟಿಫೈಡ್ ಫ್ಲೈಯಿಂಗ್ ಆಬ್ಜೆಕ್ಟ್ (ಯುಎಫ್ಒ)ಗಳನ್ನು ಒಳಗೊಂಡಿದೆ ಎಂದು ಅಜಯ್ ಸರ್ಪೇಷ್ಕರ್ ತಿಳಿಸಿದ್ದಾರೆ.
ಅಜಯ್ ಸರ್ಪೇಷ್ಕರ್ ಚಿತ್ರದ ಕುರಿತು:
ಚಿತ್ರಗಳು ನಿರ್ದೇಶಕರ ಸಂವೇದನೆ ಮಾತ್ರವಲ್ಲ, ಅದನ್ನು ವೀಕ್ಷಿಸುವ ಸಮಾಜದ ಸಂವೇದನೆಯನ್ನೂ ಒಳಗೊಂಡಿರುತ್ತದೆ. ಜನರು ತಮ್ಮ ಸಂವೇದನೆ ಹಾಗೂ ಅಭಿರುಚಿಯನ್ನು ಗೌರವಿಸುವ ಉತ್ತಮ ಚಿತ್ರಗಳಿಗಾಗಿ ಮೌನವಾಗಿ ಪ್ರತಿಭಟಿಸುತ್ತಿರುವುದನ್ನು ನಾವು ಅರಿತಿದ್ದೇವೆ. ಕನ್ನಡ ಚಿತ್ರರಂಗವನ್ನು ಉತ್ತಮಗೊಳಿಸಿ, ಭಾರತ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಅದನ್ನು ಯಶಸ್ವಿಯಾಗಿ ಪ್ರಚುರಪಡಿಸುವ ಗುರಿ ನಮ್ಮದಾಗಿದೆ. ಉತ್ತಮ ಚಿತ್ರಗಳನ್ನು ಪ್ರೀತಿಯಿಂದ ತಯಾರಿಸಿ, ಚಿತ್ರಗಳಿಂದ ದೂರ ಸರಿಯುತ್ತಿರುವ ಜನರ ಆಸಕ್ತಿಯನ್ನು ಮತ್ತೊಮ್ಮೆ ಚಿತ್ರರಂಗದತ್ತ ಸೆಳೆಯುವ ನಿಟ್ಟಿನಲ್ಲಿ ಮೈಸೂರು ಮಸಾಲ ಮೊದಲ ಪ್ರಯತ್ನವಾಗಿದೆ ಎಂದು ಅಜಯ್ ಸರ್ಪೇಷ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.