Don't Miss!
- News ಹಿಂದೂ ಯುವತಿ ಬರ್ಬರ ಹತ್ಯೆ ಪ್ರಕರಣ; ಇದೊಂದು ಲಬ್ ಜಿಹಾದ್ ಎಂದ ಜೋಶಿ: ಸಿದ್ದರಾಮಯ್ಯ ಹೇಳಿದ್ದೇನು?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಜುನ್ ಜನ್ಯ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ವೈದ್ಯರ ತಂಡ
ತೀವ್ರ ಹೊಟ್ಟೆ ನೋವು, ಎದೆ ನೋವು, ಬೆನ್ನು ನೋವು ಕಾಣಿಸಿಕೊಂಡ ಹಿನ್ನಲೆ ಕಳೆದ ಭಾನುವಾರ ಆಸ್ಪತ್ರೆಗೆ ದಾಖಲಾದ ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅರ್ಜುನ್ ಜನ್ಯ ಆರೋಗ್ಯ ಸ್ಥಿರವಾಗಿದೆ ಎಂದು ಮೈಸೂರಿನ ಆಸ್ಪತ್ರೆಯ ವೈದ್ಯರ ತಂಡ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
Recommended Video
ಗ್ಯಾಸ್ಟ್ರಿಕ್ ಮತ್ತು ಕಾರ್ಡಿಯಾಕ್ ಸಮಸ್ಯೆಯಿಂದ ಬಳಲುತ್ತಿರುವ ಅರ್ಜುನ್ ಜನ್ಯಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಾಕ್ಟರ್ ಆದಿತ್ಯ ಉಡುಪ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಎದೆ ನೋವು: ಆಸ್ಪತ್ರೆಗೆ ದಾಖಲು
''ಹೊಟ್ಟೆ ನೋವು, ಭೇದಿ, ತಲೆ ನೋವು, ಬೆನ್ನು ನೋವು, ಎದೆ ನೋವು ಕಾಣಿಸಿಕೊಂಡಿದ್ದರಿಂದ ಭಾನುವಾರ ಆಸ್ಪತ್ರೆಗೆ ಬಂದಿದ್ದರು. ಗ್ಯಾಸ್ಟ್ರಿಕ್ ಸಮಸ್ಯೆ ಇರಬಹುದು ಅಂತ ಚಿಕಿತ್ಸೆ ಕೊಟ್ಮೇಲೆ ಚೇತರಿಸಿಕೊಂಡರು. ಬಳಿಕ ಇಸಿಜಿಯಲ್ಲಿ ಬದಲಾವಣೆ ಕಂಡು ಬಂತು. ಹೀಗಾಗಿ ಹಾರ್ಟ್ ಪ್ರಾಬ್ಲಂಗೆ ಸಂಬಂಧಪಟ್ಟ ಚಿಕಿತ್ಸೆ ನೀಡಿದ್ದೇವೆ. ಸರಿಯಾದ ಸಮಯಕ್ಕೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮಾಡಿದ್ದೇವೆ. ಅರ್ಜುನ್ ಜನ್ಯ ಆರೋಗ್ಯ ಇದೀಗ ಸ್ಥಿರವಾಗಿದೆ. ಗಾಬರಿ ಪಡುವಂಥದ್ದು ಏನೂ ಇಲ್ಲ'' ಅಂತ ವೈದ್ಯರು ತಿಳಿಸಿದ್ದಾರೆ.
''ಅರ್ಜುನ್ ಜನ್ಯ ಅವರಿಗೆ ಬೆನ್ನು ನೋವು, ಎದೆ ನೋವು ಮತ್ತು ತಲೆ ನೋವು ತುಂಬಾ ಜಾಸ್ತಿ ಇತ್ತು. ಹೀಗಾಗಿ ಇಸಿಜಿ ಮಾಡಿದ್ವಿ. ಇಸಿಜಿಯಲ್ಲಿ ಚೇಂಜಸ್ ಕಾಣಿಸಿತು. ಮಧ್ಯರಾತ್ರಿ ಆಂಜಿಯೋಗ್ರಾಮ್ ಮಾಡಿದ್ವಿ. ಈಗ ಅವರ ಆರೋಗ್ಯ ಸುಧಾರಿಸಿದೆ. ಎದೆ ನೋವು, ಬೆನ್ನು ನೋವು, ತಲೆ ನೋವು ವಾಸಿ ಆಗಿದೆ'' ಎಂದು ವೈದ್ಯ ಆದಿತ್ಯ ಉಡುಪ ಹೇಳಿದ್ದಾರೆ.