Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲರೂ 'ರುಸ್ತುಂ' ಸಿನಿಮಾವನ್ನು ನೋಡಿ ಎಂದ ನಾಗ ಚೈತನ್ಯ
ಒಂದೇ ಒಂದು ದಿನ ಬಾಕಿ ಇದೆ 'ರುಸ್ತುಂ' ಸಿನಿಮಾ ಬಿಡುಗಡೆಗೆ. ಸಿನಿಮಾಗೆ ಈಗಾಗಲೇ ಅನೇಕ ಪರಭಾಷ ಸ್ಟಾರ್ ಗಳು ವಿಶ್ ಮಾಡಿದ್ದಾರೆ. ಈಗ ನಟ ನಾಗಚೈತನ್ಯ ಸಹ ಸಿನಿಮಾಗೆ ಶುಭ ಹಾರೈಸಿದ್ದಾರೆ.
''ರವಿವರ್ಮ ಸರ್ ಅವರ 'ರುಸ್ತುಂ' ಸಿನಿಮಾಗೆ ಶುಭ ಕೋರುತ್ತಿದ್ದೇನೆ. ಶಿವರಾಜ್ ಕುಮಾರ್ ಸರ್ ಹಾಗೂ ವಿವೇಕ್ ಒಬೆರಾಯ್ ಸರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಾನು ರವಿವರ್ಮ ಅವರ ಜೊತೆಗೆ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಅವರ ಕೆಲಸದ ಶೈಲಿ ನನಗೆ ತುಂಬ ಇಷ್ಟ.'' ಎಂದು ಟಾಲಿವುಡ್ ನಟ ನಾಗಚೈತನ್ಯ ಹೇಳಿದ್ದಾರೆ.
''ರವಿವರ್ಮ ಸರ್ ಇನ್ನು ಹೆಚ್ಚು ಸಿನಿಮಾ ಮಾಡಲಿ. ಸಿನಿಮಾಗೆ ಒಳ್ಳೆಯದಾಗಲಿ. ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಿ.'' ಎಂದು ನಾಗಚೈತನ್ಯ ಶುಭ ಹಾರೈಸಿದ್ದಾರೆ.
'ರುಸ್ತುಂ' ಸಿನಿಮಾದಲ್ಲಿ ಶಿವರಾಜ್ ಕುಮಾರ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಶ್ರದ್ಧಾ ಶ್ರೀನಾಥ್, ಮಯೂರಿ ಹಾಗೂ ರಚಿತಾ ರಾಮ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಸಿಳೀಸ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ನಾಳೆಯೇ (ಶುಕ್ರವಾರ) ಚಿತ್ರ ರಿಲೀಸ್ ಆಗುತ್ತಿದ್ದು, ಸಿನಿಮಾದ ಕ್ರೇಜ್ ಜಾಸ್ತಿಯಾಗುತ್ತಿದೆ. ಅನೇಕ ಚಿತ್ರಮಂದಿರಗಳಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರು ಆಗಿದೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ