Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎರಡು ವರ್ಷದ ನಂತ್ರ ಮತ್ತೆ ಬಂದ ನಾಗತಿಹಳ್ಳಿ ಚಂದ್ರಶೇಖರ್
'ಅಮೇರಿಕಾ..ಅಮೇರಿಕಾ', 'ನನ್ನ ಪ್ರೀತಿಯ ಹುಡುಗಿ', 'ಅಮೃತಧಾರೆ' ಅಂತಹ ಸದಭಿರುಚಿಯ ಚಿತ್ರಗಳನ್ನ ಕೊಟ್ಟ ಖ್ಯಾತ ಲೇಖಕ-ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ತಮ್ಮ ಎರಡು ವರ್ಷಗಳ ತಪಸ್ಸಿನ ನಂತರ ಮತ್ತೆ ಅದ್ಭುತ ದೃಶ್ಯಕಾವ್ಯದೊಂದಿಗೆ ಪ್ರತ್ಯಕ್ಷವಾಗುತ್ತಿದ್ದಾರೆ.
ಈ ಸಲ ಅವರು ಆರಿಸಿಕೊಂಡಿರುವ ಕಾದಂಬರಿ 80 ರ ದಶಕದಲ್ಲಿ ಪ್ರಕಟಗೊಂಡ ದೊಡ್ಡೇರಿ ವೆಂಕಟಗಿರಿರಾವ್ ಅವರ 'ಇಷ್ಟಕಾಮ್ಯ'. ಸ್ವಯಂ ಲೇಖಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಅನ್ಯ ಲೇಖಕರ ಕೃತಿಯನ್ನು ಆರಿಸಿಕೊಂಡಿರುವುದು ಗಮನಾರ್ಹ. [ಹೊಸ ಚಿತ್ರ ಕೈಗೆತ್ತಿಕೊಂಡ ನಾಗತಿಹಳ್ಳಿ ಚಂದ್ರಶೇಖರ್]
ಕಿರುತೆರೆಯಲ್ಲಿ ಅರಳುತ್ತಿರುವ 'ಅಗ್ನಿಸಾಕ್ಷಿ' ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ಮತ್ತು 'ಅಶ್ವಿನಿ ನಕ್ಷತ್ರ' ಖ್ಯಾತಿಯ ಮಯೂರಿ ಮತ್ತು ಕಾವ್ಯ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿಗಳಾಗಿ ಆಯ್ಕೆ ಆಗಿದ್ದಾರೆ.
ಐವತ್ತು ದಿನಗಳ ಒಂದೇ ಶೆಡ್ಯೂಲ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಚಿಕ್ಕಮಗಳೂರಿನ ಸುಂದರ ಸಹ್ಯಾದ್ರಿ ಶ್ರೇಣಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂಗಾರು ಮಳೆಯ ಅಬ್ಬರ ನಿಲ್ಲುವುದಕ್ಕೆ ಚಿತ್ರತಂಡ ಕಾಯುತ್ತಿದೆ. [ನಾಗತಿಹಳ್ಳಿ ಚಂದ್ರಶೇಖರ್ ಟೆಂಟ್ ಶಾಲೆ ಆರಂಭ]
ಈ ಬಾರಿಯ ಫಿಲ್ಮ್ ಫೇರ್ ಪ್ರಶಸ್ತಿ ವಿಜೇತ ಅಜನೀಶ್ ಲೋಕನಾಥ್ ರಾಗ ಸಂಯೋಜನೆಯಲ್ಲಿ ತೊಡಗಿದ್ದಾರೆ. ಎರಡು ವರ್ಷಗಳ ಗ್ಯಾಪ್ ನಲ್ಲಿ ಹಲವಾರು ರೀಮೇಕ್ ಚಿತ್ರಗಳನ್ನ ನಿರ್ದೇಶಿಸುವ ಅವಕಾಶಗಳು ಬಂದರೂ, ಅದನ್ನ ಒಪ್ಪದೆ ನಾಗತಿಹಳ್ಳಿ ಚಂದ್ರಶೇಖರ್ ಈ ಚಿತ್ರವನ್ನ ಕೈಗೆತ್ತಿಕೊಂಡಿದ್ದಾರಂತೆ. 'ಇಷ್ಟಕಾಮ್ಯ' ಕಾದಂಬರಿ ಆಧಾರಿತ ಈ ಚಿತ್ರಕ್ಕೆ ಸರಳ ಕನ್ನಡ ಹೆಸರಿನ ಅನ್ವೇಷಣೆಯಲ್ಲಿದ್ದಾರೆ 'ಮೇಷ್ಟ್ರು' ನಾಗತಿಹಳ್ಳಿ.