Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ಹಳ್ಳಿಯಲ್ಲೂ ಸಾಲು ಸಾಲು ಹೆಣಗಳು ಬೀಳುತ್ತಿವೆ; ನಾಗತಿಹಳ್ಳಿ ಚಂದ್ರಶೇಖರ್
ದೇಶದಲ್ಲಿ ಕೊರೊನಾ ಭೀಕರತೆಗೆ ಸಾವಿರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ. ಮಹಾಮಾರಿ ಕೊರೊನಾಗೆ ತತ್ತರಿಸಿ ಹೋಗಿರುವ ದೇಶವನನ್ನು ಕಾಪಾಡಲು ಅನೇಕರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಕೊರೊನಾದಿಂದ ನಾಲ್ಕು ಮಂದಿ ಆಪ್ತರನ್ನು ಕಳೆದಿಕೊಂಡಿದ್ದಾರೆ. ಕೊರೊನಾ ಭೀಕರತೆ ಬಗ್ಗೆ ನಾಗತಿಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಹಳ್ಳಿಗಳಾದರೂ ಸುರಕ್ಷಿತವಾಗಿವೆ ಅಂದುಕೊಂಡರೆ ಹಳ್ಳಿಗಳಲ್ಲೂ ಸಾಲು ಸಾಲು ಹೆಣಗಳು ಬೀಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಅಸಹಾಯಕರಂತೆ ಕಾಣುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಬರಹಗಾರ, ನಟ ಮಾಡಂಪು ಕುಂಜುಕುಟ್ಟನ್ ಕೊರೊನಾಗೆ ಬಲಿ
'ನಮ್ಮ ತಲೆಮಾರು ಇಂಥ ಕರಾಳ ದಿನಗಳಿಗೆ ಸಾಕ್ಷಿಯಾದೀತು ಎಂದು ಯಾರೂ ಎಣಿಸಿರಲಿಲ್ಲ. ಶತಾಯ ಗತಾಯ ಹೋರಾಡಿ ಹಾಸಿಗೆ ಪಡೆದುಕೊಂಡರೆ ದಾಖಲಾಗುವ ಮೊದಲೇ ನಾಲ್ವರು ಮಾರ್ಗ ಮಧ್ಯದಲ್ಲಿ ಮೃತ್ಯುಮಂಚವೇರಿದ್ದಾರೆ. ಕ್ಷೇಮವೆಂದು ನಂಬಿದ್ದ ನನ್ನ ಹಳ್ಳಿಯಲ್ಲೂ ಸಾಲುಸಾಲಾಗಿ ಹೆಣಬೀಳುತ್ತಿವೆ. ಎಲ್ಲರೂ ಅಸಹಾಯಕರಂತೆ ಕಾಣುತ್ತಿದ್ದೇವೆ' ಎಂದು ನೋವಿನ ಮಾತುಗಳನ್ನು ಆಡಿದ್ದಾರೆ.
Recommended Video
ಕೊರೊನಾ ಎರಡನೇ ಅಲೆಯ ಭೀಕರತೆಗೆ ಬಡವರು, ಶ್ರೀಮಂತರು, ಗಣ್ಯರು ಎನ್ನದೇ ಪ್ರಾಣಕಳೆದುಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲೂ ಅನೇಕ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ನಿರ್ಮಾಪಕ ರಾಮು, ಮಂಜುನಾಥ್, ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು, ಹಿರಿಯ ನಟ ರಾಜಾರಾಮ್ ಸೇರಿದಂತೆ ಇನ್ನು ಅನೇಕರು ಕೊರೊನಾಗೆ ಬಲಿಯಾಗಿದ್ದಾರೆ.