Don't Miss!
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪೈಲ್ವಾನ್' ಪೈರಸಿ ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಪ್ರತಿಕ್ರಿಯೆ
'ಪೈಲ್ವಾನ್' ಸಿನಿಮಾದ ಪೈರಸಿ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸುದ್ದಿ ಮಾಡಿದೆ. ಈಗಾಗಲೇ ಈ ಬಗ್ಗೆ ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.
''ಇತರರ ಬೆವರಿನ ಬೆಲೆಯನ್ನು ಕದ್ದುಣ್ಣುವುದು ಅಕ್ಷಮ್ಯ.'' ಎಂದು ನಾಗತಿಹಳ್ಳಿ ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ. ''ಯಾರದೇ ಚಿತ್ರ ಇರಲಿ, ಪೈರಸಿ ಮಾಡುವುದು ನಮ್ಮ ಮನೆಗೆ ನಾವೇ ಬೆಂಕಿ ಹಾಕಿದಂತೆ. ಕನ್ನಡ ನಾವೆಲ್ಲ ಬದುಕಬೇಕಾದ ಪುಟ್ಟಮನೆ.'' ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಪೈರಸಿ ಪ್ರಕರಣ ಕೈಬಿಡುವಂತೆ ಸುದೀಪ್ ಗೆ ಒತ್ತಡ: ಫೋನ್ ಮಾಡಿದ ಆ ಎಂಎಲ್ಸಿ ಯಾರು?
ಪೈರಸಿ ಸುದ್ದಿ ಬಹಳ ದಿನಗಳಿಂದ ಹರಿದಾಡುತ್ತಿತ್ತು,.ಈ ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ತಡವಾಗಿ ಟ್ವೀಟ್ ಮಾಡಿದ್ದರೂ, ಪರಿಣಾಮಕಾರಿಯಾಗಿ ಬರೆದಿದ್ದಾರೆ.
ಈ ಹಿಂದೆಯಿಂದಲೂ ಅನೇಕ ಸಿನಿಮಾಗಳು ಪೈರಸಿ ಆಗಿದ್ದವು. ಆದರೆ, 'ಪೈಲ್ವಾನ್' ಸಿನಿಮಾದ ಪೈರಸಿ ಬೇರೆಯದ್ದೆ ರೂಪ ಪಡೆದುಕೊಂಡಿತು. ಪೈರಸಿ ಮಾಡುವುದರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಅದನ್ನು ಹಂಚಲಾಗಿತ್ತು. ಇದನ್ನು ಬೇರೆ ಬೇರೆ ನಟರು, ನಿರ್ದೇಶಕರುಗಳು ವಿರೋಧಿಸಿರುವುದು ಮೆಚ್ಚುವ ಸಂಗತಿ.
ಸಂಕಷ್ಟದಲ್ಲಿರುವ 'ಪೈಲ್ವಾನ್' ಸುದೀಪ್ಗೆ ಬಲ ತುಂಬಿದ ಪತ್ನಿ
ಅಂದಹಾಗೆ, 'ಪೈಲ್ವಾನ್' ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಸುದೀಪ್ ತಪ್ಪು ಮಾಡಿದವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದಿದ್ದಾರೆ. ಇನ್ನು ಇದೆಲ್ಲವನ್ನು ಮೀರಿ ಸಿನಿಮಾ 25 ದಿನಗಳನ್ನು ಪೂರೈಸಿದೆ.