'ಪರಿಮಳಾ ಲಾಡ್ಜ್' ಸಿನಿಮಾ ವಿರುದ್ಧ ಫಿಲ್ಮ್ ಚೆಂಬರ್ ನಲ್ಲಿ ದೂರು
Recommended Video
ವಿಜಯ್ ಪ್ರಸಾದ್ ನಿರ್ದೇಶನದ 'ಪರಿಮಳಾ ಲಾಡ್ಜ್' ಸಿನಿಮಾ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ. 'ನಮ್ಮ ಕರ್ನಾಟಕ ರಕ್ಷಣಾ ವೇದಿಕೆ' ಸಿನಿಮಾದ ವಿರುದ್ಧ ಫಿಲ್ಮ್ ಚೆಂಬರ್ ಮೆಟ್ಟಿಲೇರಿದೆ.
'ಪರಿಮಳಾ ಲಾಡ್ಜ್' ಟೀಸರ್ ಬಿಡುಗಡೆ ಆಗಿದ್ದೆ ತಡ ದೊಡ್ಡ ವಿವಾದ ಸೃಷ್ಟಿ ಮಾಡಿದೆ. ಇತ್ತೀಚಿಗಷ್ಟೆ ಹಿರಿಯ ಪತ್ರಕರ್ತ ರವಿ ಬೆಳಗೆರೆ ಚಿತ್ರದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದರು. ಈಗ ಈ ವಿಷಯ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದೆ.
ಸಿನಿಮಾದ ಟೀಸರ್ ನಲ್ಲಿ ಬಳಸಿರುವ ಅಶ್ಲೀಲ ಸಂಭಾಷಣೆಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯ ಮಾಡಿರುವ 'ನಮ್ಮ ಕರ್ನಾಟಕ ರಕ್ಷಣಾ ವೇದಿಕೆ', ಇಲ್ಲದಿದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದೆ. ಜೊತೆಗೆ ಸಿನಿಮಾದ ಬಿಡುಗಡೆ ವೇಳೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಚಿತ್ರದ ನಾಯಕ ನಟರು, ನಿರ್ದೇಶಕರು ಹಾಗೂ ನಿರ್ಮಾಪಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಮನವಿ ಮಾಡಿದೆ. ಅಂದಹಾಗೆ, ಚಿತ್ರದಲ್ಲಿ ದತ್ತಣ್ಣ, ಸತೀಶ್ ನೀನಾಸಂ, ಲೂಸ್ ಮಾದ ಯೋಗಿ, ಸುಮನ್ ರಂಗನಾಥ್, ಬುಲೆಟ್ ಪ್ರಕಾಶ್, ಹೇಮಾ ದತ್ ನಟಿಸಿದ್ದಾರೆ.

'ಪರಿಮಳಾ ಲಾಡ್ಜ್' ಚಿತ್ರದ ಟೀಸರ್ ಆಗಸ್ಟ್ 28 ರಂದು ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ಒಂದು ಮಿಲಿಯನ್ ಗೂ ಅಧಿಕ ಹಿಟ್ಸ್ ಪಡೆದುಕೊಂಡಿದೆ.


Click it and Unblock the Notifications











